ಸವಣೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸವಣೂರು ಸರಕಾರಿ ಪ.ಪೂ.ಕಾಲೇಜು ಇದರ ವತಿಯಿಂದ ತಾಲೂಕು ಮಟ್ಟದ ಪ.ಪೂ.ವಿಭಾಗದ ಖೋಖೋ ಪಂದ್ಯಾಟ ನಡೆಯಿತು.
ಪಂದ್ಯಾಟವನ್ನು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ ನಿಡ್ವಣ್ಣಾಯ ಅವರು ಉದ್ಘಾಟಿಸಿದರು.ಕಾಲೇಜಿನ ಅಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಗಿರಿಶಂಕರ ಸುಲಾಯ ಅವರು ಅಧ್ಯಕ್ಷತೆ ವಹಿಸಿದ್ದರು.
ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ರಾಕೇಶ್ ರೈ ಕೆಡೆಂಜಿ,ಸವಣೂರು ಯುವಕ ಮಂಡಲದ ಅಧ್ಯಕ್ಷ ತಾರಾನಾಥ ಪಿ.ಸವಣೂರು,ನಿವೃತ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಮಾಧವ ಬಿ.ಕೆ,ಸವಣೂರು ಪ.ಪೂ.ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಚಿನ್ ಕುಮಾರ್ ಜೈನ್,ಸವಣೂರು ಪ್ರೌಢಶಾಲಾ ಮುಖ್ಯಗುರು ರಘು ಬಿ.ಆರ್ ಉಪಸ್ಥಿತರಿದ್ದರು.
ಗೌರವಾರ್ಪಣೆ
ಇದೇ ಸಂದರ್ಭದಲ್ಲಿ ಸವಣೂರು ಪ್ರೌಢಶಾಲೆಯಲ್ಲಿ ಮುಖ್ಯಗುರುಗಳಾಗಿ ಕರ್ತವ್ಯ ನಿರ್ವಹಿಸಿ ಪೆರ್ನೆ ಬೆಳಿಯೂರು ಪ್ರೌಢಶಾಲೆಗೆ ವರ್ಗಾವಣೆಗೊಂಡ ತಾರಾನಾಥ ರೈ ಅವರನ್ನು ಕಾಲೇಜಿನ ವತಿಯಿಂದ ಗೌರವಿಸಲಾಯಿತು.
ಕಾಲೇಜಿನ ಪ್ರಾಚಾರ್ಯೆ ಪದ್ಮಾವತಿ ಎನ್.ಪಿ ಸ್ವಾಗತಿಸಿ,ಹಿರಿಯ ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣ ಅವರು ವಂದಿಸಿದರು.ಉಪನ್ಯಾಸಕ ರಾಜೀವ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…