ಸವಣೂರು :ತೀರಾ ಬಡತನದಲ್ಲಿರುವ ಸವಣೂರು ಗ್ರಾಮದ ಅರೆಲ್ತಡಿಯ ಕುಸುಮ ಕೆಡೆಂಜಿ ಎಂಬವರಿಗೆ ಅವರ ಮನೆ ನಿರ್ಮಾಣ ಕ್ಕೆ ಮತ್ತು ಮಗಳ ಮದುವೆ ಸಲುವಾಗಿ ಸವಣೂರು ಗ್ರಾ.ಪಂ.ನ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಸೇರಿ ಒಟ್ಟುಮಾಡಿದ 10,250 ರೂ. ಸಹಾಯಧನವನ್ನು ಅವರ ಮನೆಗೆ ಬೇಟಿ ನೀಡಿ ಹಸ್ತಾಂತರಿಸಲಾಯಿತು.
ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರು ಕುಸುಮಾ ಅವರಿಗೆ ನೆರವು ಹಸ್ತಾಂತರಿಸಿದರು.ಈ ಸಂದರ್ಭ ಗ್ರಾ.ಪಂ.ಉಪಾಧ್ಯಕ್ಷ ರವಿಕುಮಾರ್ ಬಿ.ಕೆ,ಸದಸ್ಯರಾದ ಪ್ರಕಾಶ್ ಕುದ್ಮನಮಜಲು,ಸತೀಶ್ ಅಂಗಡಿಮೂಲೆ,ಸತೀಶ್ ಬಲ್ಯಾಯ,ರಾಜೀವಿ ಶೆಟ್ಟಿ,ವಸಂತಿ ಬಸ್ತಿ,ಗಾಯತ್ರಿ ಬರೆಮೇಲು,ಅಭಿವೃದ್ದಿ ಅಧಿಕಾರಿ ನಾರಾಯಣ ಬಟ್ಟೋಡಿ,ಲೆಕ್ಕ ಸಹಾಯಕ ಎ.ಮನ್ಮಥ,ಸಿಬಂದಿಗಳಾದ ಪ್ರಮೋದ್ ರೈ,ದಯಾನಂದ ಮಾಲೆತ್ತಾರು,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ವೇದಾವತಿ ಕೆಡೆಂಜಿ,ಓಂಕಾರ ಸೇವಾ ಸಮಿತಿಯ ತೀರ್ಥರಾಮ ಕೆಡೆಂಜಿ ಮೊದಲಾದವರಿದ್ದರು.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…