ಸವಣೂರು : ಇಲ್ಲಿನ ಪ್ರಸಿದ್ದ ಚಂದ್ರನಾಥ ಬಸದಿ ಹಾಗೂ ಪದ್ಮಾವತಿ ದೇವಿ ಸನ್ನಿಧಿಗೆ ತೆರಳುವ ರಸ್ತೆಯ ಅಭಿವೃದ್ದಿಗೆ ರಾಜ್ಯ ಸಭಾ ಸದಸ್ಯರ ಮೂಲಕ ಅನುದಾನ ದೊರಕಿಸಿಕೊಡುವಂತೆ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸವಣೂರಿನ ನಿಯೋಗ ಬೆಂಗಳೂರಿನಲ್ಲಿ ಅವರನ್ನು ಬೇಟಿ ಮಾಡಿ ಮನವಿ ಸಲ್ಲಿಸಿದೆ.
ಹಲವು ವರುಷಗಳ ಇತಿಹಾಸ ಹೊಂದಿರುವ ಬಸದಿಯನ್ನು ಸಂದರ್ಶಿಸಲು ನೂರಾರು ಭಕ್ತರು ವಿವಿದೆಡೆಯಿಂದ ಆಗಮಿಸುತ್ತಿದ್ದಾರೆ. ಆದರೆ ಇಲ್ಲಿಗೆ ಮುಖ್ಯ ರಸ್ತೆಯಿಂದ ಸಂಪರ್ಕ ಕಲ್ಪಿಸುವ ರಸ್ತೆಯೂ ತೀರಾ ಹದೆಗೆಟ್ಟಿದ್ದು ಇದರಿಂದ ಸಮಸ್ಯೆಯಾಗಿದೆ ಈ ನಿಟ್ಟಿನಲ್ಲಿ ಅನುದಾನ ದೊರಕಿಸಿಕೊಡುವಂತೆ ಮನವಿ ಸಲ್ಲಿಸಿದರು.
ಬೆಂಗಳೂರಿಗೆ ತೆರಳಿದ ನಿಯೋಗದಲ್ಲಿ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸುರೇಶ್ ಕೆ ಪೆರಾಬೆ, ಸವಣೂರು ಗ್ರಾ.ಪಂ.ಸದಸ್ಯರಾದ ಪ್ರಕಾಶ್ ಕುದ್ಮನಮಜಲು, ಸತೀಶ್ ಅಂಗಡಿಮೂಲೆ, ಓಂಕಾರ ಸೇವಾ ಸಮಿತಿಯ ತೀರ್ಥರಾಮ ಕೆಡೆಂಜಿ, ಸವಣೂರು ಯುವಕ ಮಂಡಲದ ಕಾರ್ಯದರ್ಶಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಇದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…