ಸವಣೂರು : ಇಲ್ಲಿನ ಪ್ರಸಿದ್ದ ಚಂದ್ರನಾಥ ಬಸದಿ ಹಾಗೂ ಪದ್ಮಾವತಿ ದೇವಿ ಸನ್ನಿಧಿಗೆ ತೆರಳುವ ರಸ್ತೆಯ ಅಭಿವೃದ್ದಿಗೆ ರಾಜ್ಯ ಸಭಾ ಸದಸ್ಯರ ಮೂಲಕ ಅನುದಾನ ದೊರಕಿಸಿಕೊಡುವಂತೆ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸವಣೂರಿನ ನಿಯೋಗ ಬೆಂಗಳೂರಿನಲ್ಲಿ ಅವರನ್ನು ಬೇಟಿ ಮಾಡಿ ಮನವಿ ಸಲ್ಲಿಸಿದೆ.
ಹಲವು ವರುಷಗಳ ಇತಿಹಾಸ ಹೊಂದಿರುವ ಬಸದಿಯನ್ನು ಸಂದರ್ಶಿಸಲು ನೂರಾರು ಭಕ್ತರು ವಿವಿದೆಡೆಯಿಂದ ಆಗಮಿಸುತ್ತಿದ್ದಾರೆ. ಆದರೆ ಇಲ್ಲಿಗೆ ಮುಖ್ಯ ರಸ್ತೆಯಿಂದ ಸಂಪರ್ಕ ಕಲ್ಪಿಸುವ ರಸ್ತೆಯೂ ತೀರಾ ಹದೆಗೆಟ್ಟಿದ್ದು ಇದರಿಂದ ಸಮಸ್ಯೆಯಾಗಿದೆ ಈ ನಿಟ್ಟಿನಲ್ಲಿ ಅನುದಾನ ದೊರಕಿಸಿಕೊಡುವಂತೆ ಮನವಿ ಸಲ್ಲಿಸಿದರು.
ಬೆಂಗಳೂರಿಗೆ ತೆರಳಿದ ನಿಯೋಗದಲ್ಲಿ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸುರೇಶ್ ಕೆ ಪೆರಾಬೆ, ಸವಣೂರು ಗ್ರಾ.ಪಂ.ಸದಸ್ಯರಾದ ಪ್ರಕಾಶ್ ಕುದ್ಮನಮಜಲು, ಸತೀಶ್ ಅಂಗಡಿಮೂಲೆ, ಓಂಕಾರ ಸೇವಾ ಸಮಿತಿಯ ತೀರ್ಥರಾಮ ಕೆಡೆಂಜಿ, ಸವಣೂರು ಯುವಕ ಮಂಡಲದ ಕಾರ್ಯದರ್ಶಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಇದ್ದರು.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…