ಸವಣೂರು : ಸವಣೂರು ವಿದ್ಯಾರಶ್ಮಿಯಲ್ಲಿ ಪ್ರಥಮ ಪಿ.ಯು.ಸಿ. ವಿಜ್ಞಾನ ಮತ್ತು ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳ ಪ್ರವೇಶೋತ್ಸವ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಅವರು ಪ್ರಥಮ ಪಿ.ಯು.ಸಿ.ಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪೆನ್ನುಗಳನ್ನು ವಿತರಿಸಿ ಮಾತನಾಡಿ , ನಮ್ಮಲ್ಲಿ ಗ್ರಾಮೀಣ ಭಾಗದ ಸಾಧಾರಣ ಕಲಿಕಾ ಮಟ್ಟದ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳನ್ನು ದಾಖಲಿಸಿಕೊಂಡು ಅವರು 90 ಶೇಕಡಾಕ್ಕಿಂತ ಮಿಕ್ಕಿ ಅಂಕಗಳಿಸುವಂತೆ ಮಾಡುವುದರ ಕಡೆಗೆ ವಿಶೇಷ ಆದ್ಯತೆ ನೀಡುತ್ತಿದ್ದೇವೆ .ವಿದ್ಯಾರಶ್ಮಿ ಯಾವತ್ತೂ ಆರ್ಥಿಕ ಆದಾಯದ ಕಡೆಗೆ ಗಮನವೀಯದೆ ಉತ್ತಮ ಗುಣಮಟ್ಟದ ಪರಿಪೂರ್ಣ ಶಿಕ್ಷಣದ ಕಡೆಗೆ ಮಾತ್ರ ವಿಶೇಷ ಗಮನವೀಯುತ್ತದೆ ಎಂದರು.
ಆಡಳಿತಾಧಿಕಾರಿ ಇಂಜಿನಿಯರ್ ಅಶ್ವಿನ್ ಎಲ್. ಶೆಟ್ಟಿ ಮಾತನಾಡಿ ನಮ್ಮ ಪ್ರಗತಿ ನಿಸ್ಸಂಶಯವಾಗಿಯೂ ನಮ್ಮ ಕೈಯ್ಯಲ್ಲೇ ಇದೆ ಹೊರತು ಇತರ ಯಾವುದೇ ಮೂಲಗಳಲ್ಲಿ ಇಲ್ಲ ಎಂದರು.
ಪ್ರಾಂಶುಪಾಲ ಸೀತಾರಾಮ ಕೇವಳ , ಕಾಲೇಜಿನ ನಿಯಮಗಳ ಬಗ್ಗೆ ಸವಿವರವಾಗಿ ತಿಳಿಸಿದರು. ಉಪ ಪ್ರಾಂಶುಪಾಲೆ ಶಶಿಕಲಾ ಆಳ್ವ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಸಾಕ್ಷಿ ಮತ್ತು ತಂಡದವರು ಪ್ರಾರ್ಥಿಸಿದರು.
ಉಪನ್ಯಾಸಕಿ ಜಯಶ್ರೀ ವಂದಿಸಿದರು. ಉಪನ್ಯಾಸಕ ಮಹಮ್ಮದ್ ತನ್ವೀರ್ ಅವರು ಕಾರ್ಯಕ್ರಮ ನಿರೂಪಿಸಿದರು.
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…