ಸವಣೂರು : ಸವಣೂರು ವಿದ್ಯಾರಶ್ಮಿಯಲ್ಲಿ ಪ್ರಥಮ ಪಿ.ಯು.ಸಿ. ವಿಜ್ಞಾನ ಮತ್ತು ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳ ಪ್ರವೇಶೋತ್ಸವ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಅವರು ಪ್ರಥಮ ಪಿ.ಯು.ಸಿ.ಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪೆನ್ನುಗಳನ್ನು ವಿತರಿಸಿ ಮಾತನಾಡಿ , ನಮ್ಮಲ್ಲಿ ಗ್ರಾಮೀಣ ಭಾಗದ ಸಾಧಾರಣ ಕಲಿಕಾ ಮಟ್ಟದ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳನ್ನು ದಾಖಲಿಸಿಕೊಂಡು ಅವರು 90 ಶೇಕಡಾಕ್ಕಿಂತ ಮಿಕ್ಕಿ ಅಂಕಗಳಿಸುವಂತೆ ಮಾಡುವುದರ ಕಡೆಗೆ ವಿಶೇಷ ಆದ್ಯತೆ ನೀಡುತ್ತಿದ್ದೇವೆ .ವಿದ್ಯಾರಶ್ಮಿ ಯಾವತ್ತೂ ಆರ್ಥಿಕ ಆದಾಯದ ಕಡೆಗೆ ಗಮನವೀಯದೆ ಉತ್ತಮ ಗುಣಮಟ್ಟದ ಪರಿಪೂರ್ಣ ಶಿಕ್ಷಣದ ಕಡೆಗೆ ಮಾತ್ರ ವಿಶೇಷ ಗಮನವೀಯುತ್ತದೆ ಎಂದರು.
ಆಡಳಿತಾಧಿಕಾರಿ ಇಂಜಿನಿಯರ್ ಅಶ್ವಿನ್ ಎಲ್. ಶೆಟ್ಟಿ ಮಾತನಾಡಿ ನಮ್ಮ ಪ್ರಗತಿ ನಿಸ್ಸಂಶಯವಾಗಿಯೂ ನಮ್ಮ ಕೈಯ್ಯಲ್ಲೇ ಇದೆ ಹೊರತು ಇತರ ಯಾವುದೇ ಮೂಲಗಳಲ್ಲಿ ಇಲ್ಲ ಎಂದರು.
ಪ್ರಾಂಶುಪಾಲ ಸೀತಾರಾಮ ಕೇವಳ , ಕಾಲೇಜಿನ ನಿಯಮಗಳ ಬಗ್ಗೆ ಸವಿವರವಾಗಿ ತಿಳಿಸಿದರು. ಉಪ ಪ್ರಾಂಶುಪಾಲೆ ಶಶಿಕಲಾ ಆಳ್ವ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಸಾಕ್ಷಿ ಮತ್ತು ತಂಡದವರು ಪ್ರಾರ್ಥಿಸಿದರು.
ಉಪನ್ಯಾಸಕಿ ಜಯಶ್ರೀ ವಂದಿಸಿದರು. ಉಪನ್ಯಾಸಕ ಮಹಮ್ಮದ್ ತನ್ವೀರ್ ಅವರು ಕಾರ್ಯಕ್ರಮ ನಿರೂಪಿಸಿದರು.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…