Advertisement
ನಮ್ಮೂರ ಸುದ್ದಿ

ಸವಣೂರು : ವಿದ್ಯಾರಶ್ಮಿಯಲ್ಲಿ ಪಿ.ಯು.ಸಿ. ತರಗತಿಗಳ ವಿದ್ಯಾರ್ಥಿಗಳ ಪ್ರವೇಶೋತ್ಸವ

Share

ಸವಣೂರು : ಸವಣೂರು ವಿದ್ಯಾರಶ್ಮಿಯಲ್ಲಿ ಪ್ರಥಮ ಪಿ.ಯು.ಸಿ. ವಿಜ್ಞಾನ ಮತ್ತು ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳ ಪ್ರವೇಶೋತ್ಸವ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಅವರು ಪ್ರಥಮ ಪಿ.ಯು.ಸಿ.ಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪೆನ್ನುಗಳನ್ನು ವಿತರಿಸಿ ಮಾತನಾಡಿ , ನಮ್ಮಲ್ಲಿ ಗ್ರಾಮೀಣ ಭಾಗದ ಸಾಧಾರಣ ಕಲಿಕಾ ಮಟ್ಟದ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳನ್ನು ದಾಖಲಿಸಿಕೊಂಡು ಅವರು 90 ಶೇಕಡಾಕ್ಕಿಂತ ಮಿಕ್ಕಿ ಅಂಕಗಳಿಸುವಂತೆ ಮಾಡುವುದರ ಕಡೆಗೆ ವಿಶೇಷ ಆದ್ಯತೆ ನೀಡುತ್ತಿದ್ದೇವೆ .ವಿದ್ಯಾರಶ್ಮಿ ಯಾವತ್ತೂ ಆರ್ಥಿಕ ಆದಾಯದ ಕಡೆಗೆ ಗಮನವೀಯದೆ ಉತ್ತಮ ಗುಣಮಟ್ಟದ ಪರಿಪೂರ್ಣ ಶಿಕ್ಷಣದ ಕಡೆಗೆ ಮಾತ್ರ ವಿಶೇಷ ಗಮನವೀಯುತ್ತದೆ ಎಂದರು.

ಆಡಳಿತಾಧಿಕಾರಿ ಇಂಜಿನಿಯರ್ ಅಶ್ವಿನ್ ಎಲ್. ಶೆಟ್ಟಿ ಮಾತನಾಡಿ ನಮ್ಮ ಪ್ರಗತಿ ನಿಸ್ಸಂಶಯವಾಗಿಯೂ ನಮ್ಮ ಕೈಯ್ಯಲ್ಲೇ ಇದೆ ಹೊರತು ಇತರ ಯಾವುದೇ ಮೂಲಗಳಲ್ಲಿ ಇಲ್ಲ ಎಂದರು.

ಪ್ರಾಂಶುಪಾಲ ಸೀತಾರಾಮ ಕೇವಳ , ಕಾಲೇಜಿನ ನಿಯಮಗಳ ಬಗ್ಗೆ ಸವಿವರವಾಗಿ ತಿಳಿಸಿದರು. ಉಪ ಪ್ರಾಂಶುಪಾಲೆ ಶಶಿಕಲಾ ಆಳ್ವ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಸಾಕ್ಷಿ ಮತ್ತು ತಂಡದವರು ಪ್ರಾರ್ಥಿಸಿದರು.

ಉಪನ್ಯಾಸಕಿ ಜಯಶ್ರೀ ವಂದಿಸಿದರು. ಉಪನ್ಯಾಸಕ ಮಹಮ್ಮದ್ ತನ್ವೀರ್ ಅವರು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

5 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

11 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

23 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

23 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

2 days ago