ಸವಣೂರು : ಸವಣೂರು ವಿದ್ಯಾರಶ್ಮಿಯಲ್ಲಿ ಪ್ರಥಮ ಪಿ.ಯು.ಸಿ. ವಿಜ್ಞಾನ ಮತ್ತು ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳ ಪ್ರವೇಶೋತ್ಸವ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಅವರು ಪ್ರಥಮ ಪಿ.ಯು.ಸಿ.ಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪೆನ್ನುಗಳನ್ನು ವಿತರಿಸಿ ಮಾತನಾಡಿ , ನಮ್ಮಲ್ಲಿ ಗ್ರಾಮೀಣ ಭಾಗದ ಸಾಧಾರಣ ಕಲಿಕಾ ಮಟ್ಟದ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳನ್ನು ದಾಖಲಿಸಿಕೊಂಡು ಅವರು 90 ಶೇಕಡಾಕ್ಕಿಂತ ಮಿಕ್ಕಿ ಅಂಕಗಳಿಸುವಂತೆ ಮಾಡುವುದರ ಕಡೆಗೆ ವಿಶೇಷ ಆದ್ಯತೆ ನೀಡುತ್ತಿದ್ದೇವೆ .ವಿದ್ಯಾರಶ್ಮಿ ಯಾವತ್ತೂ ಆರ್ಥಿಕ ಆದಾಯದ ಕಡೆಗೆ ಗಮನವೀಯದೆ ಉತ್ತಮ ಗುಣಮಟ್ಟದ ಪರಿಪೂರ್ಣ ಶಿಕ್ಷಣದ ಕಡೆಗೆ ಮಾತ್ರ ವಿಶೇಷ ಗಮನವೀಯುತ್ತದೆ ಎಂದರು.
ಆಡಳಿತಾಧಿಕಾರಿ ಇಂಜಿನಿಯರ್ ಅಶ್ವಿನ್ ಎಲ್. ಶೆಟ್ಟಿ ಮಾತನಾಡಿ ನಮ್ಮ ಪ್ರಗತಿ ನಿಸ್ಸಂಶಯವಾಗಿಯೂ ನಮ್ಮ ಕೈಯ್ಯಲ್ಲೇ ಇದೆ ಹೊರತು ಇತರ ಯಾವುದೇ ಮೂಲಗಳಲ್ಲಿ ಇಲ್ಲ ಎಂದರು.
ಪ್ರಾಂಶುಪಾಲ ಸೀತಾರಾಮ ಕೇವಳ , ಕಾಲೇಜಿನ ನಿಯಮಗಳ ಬಗ್ಗೆ ಸವಿವರವಾಗಿ ತಿಳಿಸಿದರು. ಉಪ ಪ್ರಾಂಶುಪಾಲೆ ಶಶಿಕಲಾ ಆಳ್ವ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಸಾಕ್ಷಿ ಮತ್ತು ತಂಡದವರು ಪ್ರಾರ್ಥಿಸಿದರು.
ಉಪನ್ಯಾಸಕಿ ಜಯಶ್ರೀ ವಂದಿಸಿದರು. ಉಪನ್ಯಾಸಕ ಮಹಮ್ಮದ್ ತನ್ವೀರ್ ಅವರು ಕಾರ್ಯಕ್ರಮ ನಿರೂಪಿಸಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…