ಸವಣೂರು: ವಿದ್ಯಾರಶ್ಮಿ ಪದವಿ ಕಾಲೇಜಿನಲ್ಲಿ ಪೋಷಕರ ಸಮಾವೇಶ

September 8, 2019
7:00 PM

ಸವಣೂರು : ಇಲ್ಲಿನ ಎಸ್.ಎನ್.ಆರ್ ರೂರಲ್ ಎಜ್ಯುಕೇಶನ್ ಟ್ರಸ್ಟ್ ಪ್ರವರ್ತಿತ ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಪೋಷಕರ ಸಮಾವೇಶ ಮತ್ತು ವಿದ್ಯಾರ್ಥಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

Advertisement

ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಅವರು ಉದ್ಘಾಟಿಸಿ ಮಾತನಾಡಿ,ವಿದ್ಯಾರ್ಥಿಗಳನ್ನು ಹೆತ್ತವರು ಹಾಗೂ ಶಿಕ್ಷಕರು ಪ್ರೀತಿಯಿಂದ ನೋಡಿಕೊಳ್ಳಬೇಕು.ವಿದ್ಯಾರ್ಥಿಗಳ ಶ್ರೇಯೋಭಿವೃದ್ದಿಗಾಗಿ ಸಂಸ್ಥೆಯಲ್ಲಿ ಅನೇಕ ವಿನೂತನ ಕಾರ್ಯಕ್ರಮಗಳನ್ನು ಮಾಡಲಾಗುತ್ತದೆ ಎಂದರು.

ಮುಖ್ಯ ಅತಿಥಿ ಪುತ್ತೂರು ವಕೀಲರ ಸಂಘದ ಪೂರ್ವಾಧ್ಯಕ್ಷ ಕೆ.ಭಾಸ್ಕರ ಕೋಡಿಂಬಾಳ ಮಾತನಾಡಿ,ವಿದ್ಯಾರ್ಥಿಗಳ ಭವಿಷ್ಯವನ್ನು ನಾಲ್ಕು ವಿಧಗಳಾಗಿ ವಿಂಗಡಿಸಬಹುದು. ಮೊದಲನೇಯದಾಗಿ ವಿದ್ಯಾರ್ಥಿಗಳೇ ಸ್ವತಃ ತಮ್ಮ ಭವಿಷ್ಯ ನಿರ್ಮಾಣ ಮಾಡುವುದು,ನಂತರ ಹೆತ್ತವರು,ಶಿಕ್ಷಕರು,ಸಮಾಜ ನಿರ್ಣಯಿಸಬೇಕು.ವಿದ್ಯಾರ್ಥಿಗಳು ಉತ್ತಮರ ಸಹವಾಸ ಮಾಡಬೇಕು.ಶಿಕ್ಷಕರು ಹಕ್ಕು ಮತ್ತು ಕರ್ತವ್ಯದಿಂದ ವಿದ್ಯಾರ್ಥಿಗಳಲ್ಲಿರುವ ಸುಪ್ತವಾಗಿರುವ ಕೌಶಲಗಳನ್ನು ಬೆಳೆಸಬೇಕು.ಋಣಾತ್ಮಕ ಆಲೋಚನೆಯನ್ನು ಬದಿಗೊತ್ತಿ ಧನಾತ್ಮಕ ಚಿಂತನೆಯನ್ನು ಅಳವಡಿಸಿಕೊಳ್ಳಬೇಕು ಎಂದರು.

ಕಾಲೇಜಿನ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಮಾತನಾಡಿ,ವಿದ್ಯಾರ್ಥಿಗಳು ಪರಿಶ್ರಮದಿಂದ ಮಾತ್ರ ಯಶಸ್ವಿಯಾಗಲು ಸಾಧ್ಯ.ಸಮಯ,ಶಿಕ್ಷಕರಿಗೆ,ಹೆತ್ತವರಿಗೆ ಗೌರವ ಕೊಡಬೇಕು ಎಂದರು.ವೇದಿಕೆಯಲ್ಲಿ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಚಾರ್ಯೆ ರಾಜಲಕ್ಷ್ಮೀ ಎಸ್ ರೈ ಅವರು,ಕಾಲೇಜಿನ ನಿಯಮಗಳನ್ನು ಸವಿವಿರವಾಗಿ ತಿಳಿಸಿದರು.ಕಾಲೇಜಿನ ಉಪಪ್ರಾಚಾರ್ಯ ಶೇಷಗಿರಿ ಎಂ ಅವರು ಸ್ವಾಗತಿಸಿದರು,ವಿದ್ಯಾರ್ಥಿ ರಿತೇಶ್ ಪ್ರಾರ್ಥಿಸಿದರು.ನಿತೇಶ್ ವಂದಿಸಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು
ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ
February 20, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು
February 20, 2026
7:20 AM
by: ಡಾ.ಚಂದ್ರಶೇಖರ ದಾಮ್ಲೆ

You cannot copy content of this page - Copyright -The Rural Mirror