Advertisement
ಸುದ್ದಿಗಳು

ಸವಣೂರು: ವಿದ್ಯಾರಶ್ಮಿ ಪದವಿ ಕಾಲೇಜಿನಲ್ಲಿ ಪೋಷಕರ ಸಮಾವೇಶ

Share

ಸವಣೂರು : ಇಲ್ಲಿನ ಎಸ್.ಎನ್.ಆರ್ ರೂರಲ್ ಎಜ್ಯುಕೇಶನ್ ಟ್ರಸ್ಟ್ ಪ್ರವರ್ತಿತ ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಪೋಷಕರ ಸಮಾವೇಶ ಮತ್ತು ವಿದ್ಯಾರ್ಥಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

Advertisement
Advertisement
Advertisement
Advertisement

ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಅವರು ಉದ್ಘಾಟಿಸಿ ಮಾತನಾಡಿ,ವಿದ್ಯಾರ್ಥಿಗಳನ್ನು ಹೆತ್ತವರು ಹಾಗೂ ಶಿಕ್ಷಕರು ಪ್ರೀತಿಯಿಂದ ನೋಡಿಕೊಳ್ಳಬೇಕು.ವಿದ್ಯಾರ್ಥಿಗಳ ಶ್ರೇಯೋಭಿವೃದ್ದಿಗಾಗಿ ಸಂಸ್ಥೆಯಲ್ಲಿ ಅನೇಕ ವಿನೂತನ ಕಾರ್ಯಕ್ರಮಗಳನ್ನು ಮಾಡಲಾಗುತ್ತದೆ ಎಂದರು.

Advertisement

ಮುಖ್ಯ ಅತಿಥಿ ಪುತ್ತೂರು ವಕೀಲರ ಸಂಘದ ಪೂರ್ವಾಧ್ಯಕ್ಷ ಕೆ.ಭಾಸ್ಕರ ಕೋಡಿಂಬಾಳ ಮಾತನಾಡಿ,ವಿದ್ಯಾರ್ಥಿಗಳ ಭವಿಷ್ಯವನ್ನು ನಾಲ್ಕು ವಿಧಗಳಾಗಿ ವಿಂಗಡಿಸಬಹುದು. ಮೊದಲನೇಯದಾಗಿ ವಿದ್ಯಾರ್ಥಿಗಳೇ ಸ್ವತಃ ತಮ್ಮ ಭವಿಷ್ಯ ನಿರ್ಮಾಣ ಮಾಡುವುದು,ನಂತರ ಹೆತ್ತವರು,ಶಿಕ್ಷಕರು,ಸಮಾಜ ನಿರ್ಣಯಿಸಬೇಕು.ವಿದ್ಯಾರ್ಥಿಗಳು ಉತ್ತಮರ ಸಹವಾಸ ಮಾಡಬೇಕು.ಶಿಕ್ಷಕರು ಹಕ್ಕು ಮತ್ತು ಕರ್ತವ್ಯದಿಂದ ವಿದ್ಯಾರ್ಥಿಗಳಲ್ಲಿರುವ ಸುಪ್ತವಾಗಿರುವ ಕೌಶಲಗಳನ್ನು ಬೆಳೆಸಬೇಕು.ಋಣಾತ್ಮಕ ಆಲೋಚನೆಯನ್ನು ಬದಿಗೊತ್ತಿ ಧನಾತ್ಮಕ ಚಿಂತನೆಯನ್ನು ಅಳವಡಿಸಿಕೊಳ್ಳಬೇಕು ಎಂದರು.

ಕಾಲೇಜಿನ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಮಾತನಾಡಿ,ವಿದ್ಯಾರ್ಥಿಗಳು ಪರಿಶ್ರಮದಿಂದ ಮಾತ್ರ ಯಶಸ್ವಿಯಾಗಲು ಸಾಧ್ಯ.ಸಮಯ,ಶಿಕ್ಷಕರಿಗೆ,ಹೆತ್ತವರಿಗೆ ಗೌರವ ಕೊಡಬೇಕು ಎಂದರು.ವೇದಿಕೆಯಲ್ಲಿ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

Advertisement

ಕಾಲೇಜಿನ ಪ್ರಾಚಾರ್ಯೆ ರಾಜಲಕ್ಷ್ಮೀ ಎಸ್ ರೈ ಅವರು,ಕಾಲೇಜಿನ ನಿಯಮಗಳನ್ನು ಸವಿವಿರವಾಗಿ ತಿಳಿಸಿದರು.ಕಾಲೇಜಿನ ಉಪಪ್ರಾಚಾರ್ಯ ಶೇಷಗಿರಿ ಎಂ ಅವರು ಸ್ವಾಗತಿಸಿದರು,ವಿದ್ಯಾರ್ಥಿ ರಿತೇಶ್ ಪ್ರಾರ್ಥಿಸಿದರು.ನಿತೇಶ್ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

5 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

5 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

6 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

15 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

16 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

16 hours ago