Advertisement
ಸುದ್ದಿಗಳು

ಸವಣೂರು: ವಿದ್ಯಾರಶ್ಮಿ ಪದವಿ ಕಾಲೇಜಿನಲ್ಲಿ ಪೋಷಕರ ಸಮಾವೇಶ

Share

ಸವಣೂರು : ಇಲ್ಲಿನ ಎಸ್.ಎನ್.ಆರ್ ರೂರಲ್ ಎಜ್ಯುಕೇಶನ್ ಟ್ರಸ್ಟ್ ಪ್ರವರ್ತಿತ ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಪೋಷಕರ ಸಮಾವೇಶ ಮತ್ತು ವಿದ್ಯಾರ್ಥಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಅವರು ಉದ್ಘಾಟಿಸಿ ಮಾತನಾಡಿ,ವಿದ್ಯಾರ್ಥಿಗಳನ್ನು ಹೆತ್ತವರು ಹಾಗೂ ಶಿಕ್ಷಕರು ಪ್ರೀತಿಯಿಂದ ನೋಡಿಕೊಳ್ಳಬೇಕು.ವಿದ್ಯಾರ್ಥಿಗಳ ಶ್ರೇಯೋಭಿವೃದ್ದಿಗಾಗಿ ಸಂಸ್ಥೆಯಲ್ಲಿ ಅನೇಕ ವಿನೂತನ ಕಾರ್ಯಕ್ರಮಗಳನ್ನು ಮಾಡಲಾಗುತ್ತದೆ ಎಂದರು.

ಮುಖ್ಯ ಅತಿಥಿ ಪುತ್ತೂರು ವಕೀಲರ ಸಂಘದ ಪೂರ್ವಾಧ್ಯಕ್ಷ ಕೆ.ಭಾಸ್ಕರ ಕೋಡಿಂಬಾಳ ಮಾತನಾಡಿ,ವಿದ್ಯಾರ್ಥಿಗಳ ಭವಿಷ್ಯವನ್ನು ನಾಲ್ಕು ವಿಧಗಳಾಗಿ ವಿಂಗಡಿಸಬಹುದು. ಮೊದಲನೇಯದಾಗಿ ವಿದ್ಯಾರ್ಥಿಗಳೇ ಸ್ವತಃ ತಮ್ಮ ಭವಿಷ್ಯ ನಿರ್ಮಾಣ ಮಾಡುವುದು,ನಂತರ ಹೆತ್ತವರು,ಶಿಕ್ಷಕರು,ಸಮಾಜ ನಿರ್ಣಯಿಸಬೇಕು.ವಿದ್ಯಾರ್ಥಿಗಳು ಉತ್ತಮರ ಸಹವಾಸ ಮಾಡಬೇಕು.ಶಿಕ್ಷಕರು ಹಕ್ಕು ಮತ್ತು ಕರ್ತವ್ಯದಿಂದ ವಿದ್ಯಾರ್ಥಿಗಳಲ್ಲಿರುವ ಸುಪ್ತವಾಗಿರುವ ಕೌಶಲಗಳನ್ನು ಬೆಳೆಸಬೇಕು.ಋಣಾತ್ಮಕ ಆಲೋಚನೆಯನ್ನು ಬದಿಗೊತ್ತಿ ಧನಾತ್ಮಕ ಚಿಂತನೆಯನ್ನು ಅಳವಡಿಸಿಕೊಳ್ಳಬೇಕು ಎಂದರು.

ಕಾಲೇಜಿನ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಮಾತನಾಡಿ,ವಿದ್ಯಾರ್ಥಿಗಳು ಪರಿಶ್ರಮದಿಂದ ಮಾತ್ರ ಯಶಸ್ವಿಯಾಗಲು ಸಾಧ್ಯ.ಸಮಯ,ಶಿಕ್ಷಕರಿಗೆ,ಹೆತ್ತವರಿಗೆ ಗೌರವ ಕೊಡಬೇಕು ಎಂದರು.ವೇದಿಕೆಯಲ್ಲಿ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಚಾರ್ಯೆ ರಾಜಲಕ್ಷ್ಮೀ ಎಸ್ ರೈ ಅವರು,ಕಾಲೇಜಿನ ನಿಯಮಗಳನ್ನು ಸವಿವಿರವಾಗಿ ತಿಳಿಸಿದರು.ಕಾಲೇಜಿನ ಉಪಪ್ರಾಚಾರ್ಯ ಶೇಷಗಿರಿ ಎಂ ಅವರು ಸ್ವಾಗತಿಸಿದರು,ವಿದ್ಯಾರ್ಥಿ ರಿತೇಶ್ ಪ್ರಾರ್ಥಿಸಿದರು.ನಿತೇಶ್ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

6 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

11 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

12 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago