Advertisement
ಸುದ್ದಿಗಳು

ಸವಣೂರು: ವಿದ್ಯಾರಶ್ಮಿ ಪದವಿ ಕಾಲೇಜಿನಲ್ಲಿ ಪೋಷಕರ ಸಮಾವೇಶ

Share

ಸವಣೂರು : ಇಲ್ಲಿನ ಎಸ್.ಎನ್.ಆರ್ ರೂರಲ್ ಎಜ್ಯುಕೇಶನ್ ಟ್ರಸ್ಟ್ ಪ್ರವರ್ತಿತ ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಪೋಷಕರ ಸಮಾವೇಶ ಮತ್ತು ವಿದ್ಯಾರ್ಥಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

Advertisement
Advertisement

ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಅವರು ಉದ್ಘಾಟಿಸಿ ಮಾತನಾಡಿ,ವಿದ್ಯಾರ್ಥಿಗಳನ್ನು ಹೆತ್ತವರು ಹಾಗೂ ಶಿಕ್ಷಕರು ಪ್ರೀತಿಯಿಂದ ನೋಡಿಕೊಳ್ಳಬೇಕು.ವಿದ್ಯಾರ್ಥಿಗಳ ಶ್ರೇಯೋಭಿವೃದ್ದಿಗಾಗಿ ಸಂಸ್ಥೆಯಲ್ಲಿ ಅನೇಕ ವಿನೂತನ ಕಾರ್ಯಕ್ರಮಗಳನ್ನು ಮಾಡಲಾಗುತ್ತದೆ ಎಂದರು.

Advertisement

ಮುಖ್ಯ ಅತಿಥಿ ಪುತ್ತೂರು ವಕೀಲರ ಸಂಘದ ಪೂರ್ವಾಧ್ಯಕ್ಷ ಕೆ.ಭಾಸ್ಕರ ಕೋಡಿಂಬಾಳ ಮಾತನಾಡಿ,ವಿದ್ಯಾರ್ಥಿಗಳ ಭವಿಷ್ಯವನ್ನು ನಾಲ್ಕು ವಿಧಗಳಾಗಿ ವಿಂಗಡಿಸಬಹುದು. ಮೊದಲನೇಯದಾಗಿ ವಿದ್ಯಾರ್ಥಿಗಳೇ ಸ್ವತಃ ತಮ್ಮ ಭವಿಷ್ಯ ನಿರ್ಮಾಣ ಮಾಡುವುದು,ನಂತರ ಹೆತ್ತವರು,ಶಿಕ್ಷಕರು,ಸಮಾಜ ನಿರ್ಣಯಿಸಬೇಕು.ವಿದ್ಯಾರ್ಥಿಗಳು ಉತ್ತಮರ ಸಹವಾಸ ಮಾಡಬೇಕು.ಶಿಕ್ಷಕರು ಹಕ್ಕು ಮತ್ತು ಕರ್ತವ್ಯದಿಂದ ವಿದ್ಯಾರ್ಥಿಗಳಲ್ಲಿರುವ ಸುಪ್ತವಾಗಿರುವ ಕೌಶಲಗಳನ್ನು ಬೆಳೆಸಬೇಕು.ಋಣಾತ್ಮಕ ಆಲೋಚನೆಯನ್ನು ಬದಿಗೊತ್ತಿ ಧನಾತ್ಮಕ ಚಿಂತನೆಯನ್ನು ಅಳವಡಿಸಿಕೊಳ್ಳಬೇಕು ಎಂದರು.

ಕಾಲೇಜಿನ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಮಾತನಾಡಿ,ವಿದ್ಯಾರ್ಥಿಗಳು ಪರಿಶ್ರಮದಿಂದ ಮಾತ್ರ ಯಶಸ್ವಿಯಾಗಲು ಸಾಧ್ಯ.ಸಮಯ,ಶಿಕ್ಷಕರಿಗೆ,ಹೆತ್ತವರಿಗೆ ಗೌರವ ಕೊಡಬೇಕು ಎಂದರು.ವೇದಿಕೆಯಲ್ಲಿ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

Advertisement

ಕಾಲೇಜಿನ ಪ್ರಾಚಾರ್ಯೆ ರಾಜಲಕ್ಷ್ಮೀ ಎಸ್ ರೈ ಅವರು,ಕಾಲೇಜಿನ ನಿಯಮಗಳನ್ನು ಸವಿವಿರವಾಗಿ ತಿಳಿಸಿದರು.ಕಾಲೇಜಿನ ಉಪಪ್ರಾಚಾರ್ಯ ಶೇಷಗಿರಿ ಎಂ ಅವರು ಸ್ವಾಗತಿಸಿದರು,ವಿದ್ಯಾರ್ಥಿ ರಿತೇಶ್ ಪ್ರಾರ್ಥಿಸಿದರು.ನಿತೇಶ್ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

5 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

5 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

5 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

5 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

5 hours ago

ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?

ತಾಪಮಾನದ ಏರಿಕೆಗೆ ಎಲ್ಲಾ ಕ್ಷೇತ್ರಗಳ ಕೊಡುಗೆ ಬಹಳಷ್ಟಿದೆ.ಆದರೆ ಅದರ ಹೊಡೆತ ಮೊದಲು ಸಿಗೋದು…

5 hours ago