Advertisement
ಸುದ್ದಿಗಳು

ಸವಣೂರು: ವಿದ್ಯಾರಶ್ಮಿ ಪದವಿ ಕಾಲೇಜಿನಲ್ಲಿ ಪೋಷಕರ ಸಮಾವೇಶ

Share

ಸವಣೂರು : ಇಲ್ಲಿನ ಎಸ್.ಎನ್.ಆರ್ ರೂರಲ್ ಎಜ್ಯುಕೇಶನ್ ಟ್ರಸ್ಟ್ ಪ್ರವರ್ತಿತ ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಪೋಷಕರ ಸಮಾವೇಶ ಮತ್ತು ವಿದ್ಯಾರ್ಥಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಅವರು ಉದ್ಘಾಟಿಸಿ ಮಾತನಾಡಿ,ವಿದ್ಯಾರ್ಥಿಗಳನ್ನು ಹೆತ್ತವರು ಹಾಗೂ ಶಿಕ್ಷಕರು ಪ್ರೀತಿಯಿಂದ ನೋಡಿಕೊಳ್ಳಬೇಕು.ವಿದ್ಯಾರ್ಥಿಗಳ ಶ್ರೇಯೋಭಿವೃದ್ದಿಗಾಗಿ ಸಂಸ್ಥೆಯಲ್ಲಿ ಅನೇಕ ವಿನೂತನ ಕಾರ್ಯಕ್ರಮಗಳನ್ನು ಮಾಡಲಾಗುತ್ತದೆ ಎಂದರು.

ಮುಖ್ಯ ಅತಿಥಿ ಪುತ್ತೂರು ವಕೀಲರ ಸಂಘದ ಪೂರ್ವಾಧ್ಯಕ್ಷ ಕೆ.ಭಾಸ್ಕರ ಕೋಡಿಂಬಾಳ ಮಾತನಾಡಿ,ವಿದ್ಯಾರ್ಥಿಗಳ ಭವಿಷ್ಯವನ್ನು ನಾಲ್ಕು ವಿಧಗಳಾಗಿ ವಿಂಗಡಿಸಬಹುದು. ಮೊದಲನೇಯದಾಗಿ ವಿದ್ಯಾರ್ಥಿಗಳೇ ಸ್ವತಃ ತಮ್ಮ ಭವಿಷ್ಯ ನಿರ್ಮಾಣ ಮಾಡುವುದು,ನಂತರ ಹೆತ್ತವರು,ಶಿಕ್ಷಕರು,ಸಮಾಜ ನಿರ್ಣಯಿಸಬೇಕು.ವಿದ್ಯಾರ್ಥಿಗಳು ಉತ್ತಮರ ಸಹವಾಸ ಮಾಡಬೇಕು.ಶಿಕ್ಷಕರು ಹಕ್ಕು ಮತ್ತು ಕರ್ತವ್ಯದಿಂದ ವಿದ್ಯಾರ್ಥಿಗಳಲ್ಲಿರುವ ಸುಪ್ತವಾಗಿರುವ ಕೌಶಲಗಳನ್ನು ಬೆಳೆಸಬೇಕು.ಋಣಾತ್ಮಕ ಆಲೋಚನೆಯನ್ನು ಬದಿಗೊತ್ತಿ ಧನಾತ್ಮಕ ಚಿಂತನೆಯನ್ನು ಅಳವಡಿಸಿಕೊಳ್ಳಬೇಕು ಎಂದರು.

ಕಾಲೇಜಿನ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಮಾತನಾಡಿ,ವಿದ್ಯಾರ್ಥಿಗಳು ಪರಿಶ್ರಮದಿಂದ ಮಾತ್ರ ಯಶಸ್ವಿಯಾಗಲು ಸಾಧ್ಯ.ಸಮಯ,ಶಿಕ್ಷಕರಿಗೆ,ಹೆತ್ತವರಿಗೆ ಗೌರವ ಕೊಡಬೇಕು ಎಂದರು.ವೇದಿಕೆಯಲ್ಲಿ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಚಾರ್ಯೆ ರಾಜಲಕ್ಷ್ಮೀ ಎಸ್ ರೈ ಅವರು,ಕಾಲೇಜಿನ ನಿಯಮಗಳನ್ನು ಸವಿವಿರವಾಗಿ ತಿಳಿಸಿದರು.ಕಾಲೇಜಿನ ಉಪಪ್ರಾಚಾರ್ಯ ಶೇಷಗಿರಿ ಎಂ ಅವರು ಸ್ವಾಗತಿಸಿದರು,ವಿದ್ಯಾರ್ಥಿ ರಿತೇಶ್ ಪ್ರಾರ್ಥಿಸಿದರು.ನಿತೇಶ್ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

2 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

9 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

11 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

20 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

20 hours ago