Advertisement
ಸುದ್ದಿಗಳು

ಸವಣೂರು: ವಿದ್ಯಾರಶ್ಮಿ ಪದವಿ ಕಾಲೇಜಿನಲ್ಲಿ ಪೋಷಕರ ಸಮಾವೇಶ

Share

ಸವಣೂರು : ಇಲ್ಲಿನ ಎಸ್.ಎನ್.ಆರ್ ರೂರಲ್ ಎಜ್ಯುಕೇಶನ್ ಟ್ರಸ್ಟ್ ಪ್ರವರ್ತಿತ ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಪೋಷಕರ ಸಮಾವೇಶ ಮತ್ತು ವಿದ್ಯಾರ್ಥಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಅವರು ಉದ್ಘಾಟಿಸಿ ಮಾತನಾಡಿ,ವಿದ್ಯಾರ್ಥಿಗಳನ್ನು ಹೆತ್ತವರು ಹಾಗೂ ಶಿಕ್ಷಕರು ಪ್ರೀತಿಯಿಂದ ನೋಡಿಕೊಳ್ಳಬೇಕು.ವಿದ್ಯಾರ್ಥಿಗಳ ಶ್ರೇಯೋಭಿವೃದ್ದಿಗಾಗಿ ಸಂಸ್ಥೆಯಲ್ಲಿ ಅನೇಕ ವಿನೂತನ ಕಾರ್ಯಕ್ರಮಗಳನ್ನು ಮಾಡಲಾಗುತ್ತದೆ ಎಂದರು.

ಮುಖ್ಯ ಅತಿಥಿ ಪುತ್ತೂರು ವಕೀಲರ ಸಂಘದ ಪೂರ್ವಾಧ್ಯಕ್ಷ ಕೆ.ಭಾಸ್ಕರ ಕೋಡಿಂಬಾಳ ಮಾತನಾಡಿ,ವಿದ್ಯಾರ್ಥಿಗಳ ಭವಿಷ್ಯವನ್ನು ನಾಲ್ಕು ವಿಧಗಳಾಗಿ ವಿಂಗಡಿಸಬಹುದು. ಮೊದಲನೇಯದಾಗಿ ವಿದ್ಯಾರ್ಥಿಗಳೇ ಸ್ವತಃ ತಮ್ಮ ಭವಿಷ್ಯ ನಿರ್ಮಾಣ ಮಾಡುವುದು,ನಂತರ ಹೆತ್ತವರು,ಶಿಕ್ಷಕರು,ಸಮಾಜ ನಿರ್ಣಯಿಸಬೇಕು.ವಿದ್ಯಾರ್ಥಿಗಳು ಉತ್ತಮರ ಸಹವಾಸ ಮಾಡಬೇಕು.ಶಿಕ್ಷಕರು ಹಕ್ಕು ಮತ್ತು ಕರ್ತವ್ಯದಿಂದ ವಿದ್ಯಾರ್ಥಿಗಳಲ್ಲಿರುವ ಸುಪ್ತವಾಗಿರುವ ಕೌಶಲಗಳನ್ನು ಬೆಳೆಸಬೇಕು.ಋಣಾತ್ಮಕ ಆಲೋಚನೆಯನ್ನು ಬದಿಗೊತ್ತಿ ಧನಾತ್ಮಕ ಚಿಂತನೆಯನ್ನು ಅಳವಡಿಸಿಕೊಳ್ಳಬೇಕು ಎಂದರು.

ಕಾಲೇಜಿನ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಮಾತನಾಡಿ,ವಿದ್ಯಾರ್ಥಿಗಳು ಪರಿಶ್ರಮದಿಂದ ಮಾತ್ರ ಯಶಸ್ವಿಯಾಗಲು ಸಾಧ್ಯ.ಸಮಯ,ಶಿಕ್ಷಕರಿಗೆ,ಹೆತ್ತವರಿಗೆ ಗೌರವ ಕೊಡಬೇಕು ಎಂದರು.ವೇದಿಕೆಯಲ್ಲಿ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಚಾರ್ಯೆ ರಾಜಲಕ್ಷ್ಮೀ ಎಸ್ ರೈ ಅವರು,ಕಾಲೇಜಿನ ನಿಯಮಗಳನ್ನು ಸವಿವಿರವಾಗಿ ತಿಳಿಸಿದರು.ಕಾಲೇಜಿನ ಉಪಪ್ರಾಚಾರ್ಯ ಶೇಷಗಿರಿ ಎಂ ಅವರು ಸ್ವಾಗತಿಸಿದರು,ವಿದ್ಯಾರ್ಥಿ ರಿತೇಶ್ ಪ್ರಾರ್ಥಿಸಿದರು.ನಿತೇಶ್ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

18 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago