Advertisement

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ ಎಸ್ ಎಸ್ ಸುವರ್ಣ ಮಹೋತ್ಸವ ಆಚರಣೆ

Share
ಸವಣೂರು: ಇಲ್ಲಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ  ಸೆ.24 ರಂದು ಎನ್ನೆಸೆಸ್ ಸುವರ್ಣ ಮಹೋತ್ಸವ ಆಚರಣೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಅವರು, ಸುಮಾರು 4 ಲಕ್ಷಕ್ಕಿಂತಲೂ ಅಧಿಕ ಸ್ವಯಂಸೇವಕರನ್ನು ಹೊಂದಿರುವ ಎನ್ ಎಸ್ ಎಸ್ ಘಟಕವು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಹಾಗೂ ಸೌಹಾರ್ದತೆಯನ್ನು ಬೆಳೆಸುವ ಘಟಕವಾಗಿದ್ದು,  ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಈ ಘಟಕದಿಂದ ಇನ್ನಷ್ಟು ಸೇವೆಗಳು ಸಮಾಜಕ್ಕೆ ಸಿಗುವಂತಾಗಲಿ ಎಂದರು.
ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ  ಡಾ. ಸೀಮಾ ಜಿ.ಕೆ ಅವರು, ಗಾಂಧೀಜಿಯವರ ಸಹಕಾರ ತತ್ವದ ಕೂಸಾಗಿರುವ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಇಂದು ವಿದ್ಯಾರ್ಥಿಗಳಲ್ಲಿ ಭದ್ರತೆ, ಸಮಯಪಾಲನೆ, ಆತ್ಮವಿಶ್ವಾಸದಂತಹ ಅನೇಕ ಧನಾತ್ಮಕ ಗುಣಗಳನ್ನು ಬೆಳೆಸುವುದರೊಂದಿಗೆ ಸಮಾಜ ಮುಖಿಯಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದರು.
ವೇದಿಕೆಯಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ, ಪ್ರಾಂಶುಪಾಲೆ ರಾಜಲಕ್ಷ್ಮಿ ಶೆಟ್ಟಿ ಹಾಗೂ ಎನ್.ಎಸ್.ಎಸ್ ಘಟಕದ ಸಂಘಟಕರು, ವಿದ್ಯಾರ್ಥಿ ಕಾರ್ಯದರ್ಶಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವು ಎನ್.ಎಸ್.ಎಸ್ ಹಾಡಿನೊಂದಿಗೆ ಆರಂಭಗೊಂಡಿತು. ಎನ್.ಎಸ್.ಎಸ್ ನ ಎಲ್ಲ ಸ್ವಯಂ ಸೇವಕರು ಪ್ರತಿಜ್ಞೆಯನ್ನು ಸ್ವೀಕರಿಸಿದರು.
ಎನ್.ಎಸ್.ಎಸ್ ಘಟಕದ ಜೊತೆಕಾರ್ಯದರ್ಶಿ ಪ್ರಿಯಾಂಕ ಸ್ವಾಗತಿಸಿ, ಕಾರ್ಯದರ್ಶಿ ಸಂಪ್ರೀತ್  ವಂದಿಸಿದರು. ಎನ್.ಎಸ್.ಎಸ್ ಘಟಕದ ಸ್ವಯಂಸೇವಕರಾದ ರಂಜಿತಾ ಕಾರ್ಯಕ್ರಮ ನಿರೂಪಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

14 minutes ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

7 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

12 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

1 day ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago