ಸವಣೂರು: ಇಲ್ಲಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನು ಆಚರಿಸಲಾಯಿತು.ಭಗವಾನ್ ಶ್ರೀಕೃಷ್ಣನ ಪ್ರತಿಮೆಗೆ ಪುಷ್ಪಾರ್ಚನೆಗೈದು ಮಾತನಾಡಿದ ಶಾಲಾ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಅವರು , ಶ್ರೀಕೃಷ್ಣನ ಆದರ್ಶಗಳು ನಮಗೆ ಮಾರ್ಗದರ್ಶನ ನೀಡುತ್ತವೆ.ಜಗತ್ತು ಕಂಡ ಅತ್ಯುತ್ತಮ ನಿರ್ವಹಣಾ ಶಾಸ್ತ್ರಜ್ಞ ಅಂದರೆ ಶ್ರೀಕೃಷ್ಣ ಎಂದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಂಗಳೂರಿನ ಭಕ್ತಿವೇದಾಂತ ಅಕಾಡೆಮಿ ಫಾರ್ ಕಲ್ಚುರಲ್ ಅಂಡ್ ಕ್ಯಾರೆಕ್ಟರ್ ಎಜ್ಯುಕೇಶನ್ ಇದರ ಸ್ಥಾಪಕರಾದ ಶರದ್ವಿಹಾರಿ ದಾಸ್ಮಾತನಾಡಿ ,ಶ್ರೀಕೃಷ್ಣನ ವಿಸ್ತೃತ ಪರಿಚಯವನ್ನು ನೀಡಿದರು.
ಬಳಿಕ 10ನೆ ತರಗತಿ ಮತ್ತು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಉತ್ತಮ ಅಧ್ಯಯನ ಮಾಡುವ ವಿಧಾನವನ್ನು ಮನನಮಾಡಿಕೊಟ್ಟರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕೃಷ್ಣ ಮತ್ತು ರಾಧೆಯರ ವೇಷಧಾರಣೆ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನಗಳನ್ನು ವಿತರಿಸಲಾಯಿತು.
ಶಿಕ್ಷಕರಾದ ಸುಬ್ಯಹ್ಮಣ್ಯ ಭಟ್ ಮತ್ತು ವಿನಯಾ ನಿರ್ಣಾಯಕರಾಗಿದ್ದರು.ಚೇತನಾ ಸ್ಪರ್ಧೆಯನ್ನು ಸಂಘಟಿಸಿದರು.ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ, ಪ್ರಾಂಶುಪಾಲ ಸೀತಾರಾಮ ಕೇವಳ ಮತ್ತು ಉಪ ಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು. ಸಹಾದಿಯಾ ಅತಿಥಿಗಳ ಪರಿಚಯಿಸಿದರು.
ಸಮಹಿತ್ ಜೈನ್ ಸ್ವಾಗತಿಸಿ , ವೈಷ್ಣವಿ ಎಂ ವಂದಿಸಿದರು.
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…