ಸವಣೂರು: ಇಲ್ಲಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನು ಆಚರಿಸಲಾಯಿತು.ಭಗವಾನ್ ಶ್ರೀಕೃಷ್ಣನ ಪ್ರತಿಮೆಗೆ ಪುಷ್ಪಾರ್ಚನೆಗೈದು ಮಾತನಾಡಿದ ಶಾಲಾ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಅವರು , ಶ್ರೀಕೃಷ್ಣನ ಆದರ್ಶಗಳು ನಮಗೆ ಮಾರ್ಗದರ್ಶನ ನೀಡುತ್ತವೆ.ಜಗತ್ತು ಕಂಡ ಅತ್ಯುತ್ತಮ ನಿರ್ವಹಣಾ ಶಾಸ್ತ್ರಜ್ಞ ಅಂದರೆ ಶ್ರೀಕೃಷ್ಣ ಎಂದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಂಗಳೂರಿನ ಭಕ್ತಿವೇದಾಂತ ಅಕಾಡೆಮಿ ಫಾರ್ ಕಲ್ಚುರಲ್ ಅಂಡ್ ಕ್ಯಾರೆಕ್ಟರ್ ಎಜ್ಯುಕೇಶನ್ ಇದರ ಸ್ಥಾಪಕರಾದ ಶರದ್ವಿಹಾರಿ ದಾಸ್ಮಾತನಾಡಿ ,ಶ್ರೀಕೃಷ್ಣನ ವಿಸ್ತೃತ ಪರಿಚಯವನ್ನು ನೀಡಿದರು.
ಬಳಿಕ 10ನೆ ತರಗತಿ ಮತ್ತು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಉತ್ತಮ ಅಧ್ಯಯನ ಮಾಡುವ ವಿಧಾನವನ್ನು ಮನನಮಾಡಿಕೊಟ್ಟರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕೃಷ್ಣ ಮತ್ತು ರಾಧೆಯರ ವೇಷಧಾರಣೆ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನಗಳನ್ನು ವಿತರಿಸಲಾಯಿತು.
ಶಿಕ್ಷಕರಾದ ಸುಬ್ಯಹ್ಮಣ್ಯ ಭಟ್ ಮತ್ತು ವಿನಯಾ ನಿರ್ಣಾಯಕರಾಗಿದ್ದರು.ಚೇತನಾ ಸ್ಪರ್ಧೆಯನ್ನು ಸಂಘಟಿಸಿದರು.ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ, ಪ್ರಾಂಶುಪಾಲ ಸೀತಾರಾಮ ಕೇವಳ ಮತ್ತು ಉಪ ಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು. ಸಹಾದಿಯಾ ಅತಿಥಿಗಳ ಪರಿಚಯಿಸಿದರು.
ಸಮಹಿತ್ ಜೈನ್ ಸ್ವಾಗತಿಸಿ , ವೈಷ್ಣವಿ ಎಂ ವಂದಿಸಿದರು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…