Advertisement
ಧಾರ್ಮಿಕ

ಸವಣೂರು ಶಾರದಾಂಬ ಸೇವಾ ಸಂಘದಿಂದ 15ನೇ ವರ್ಷದ ಶಾರದೋತ್ಸವ

Share

ಸವಣೂರು: ಶ್ರೀ ಶಾರದಾಂಬಾ ಸೇವಾ ಸಂಘ ಸವಣೂರು ಇದರ ವತಿಯಿಂದ ನಡೆಯುವ 15ನೇ ವರ್ಷದ ಶ್ರೀ ಶಾರದೋತ್ಸವ ಅ.8ರಂದು ಸವಣೂರು ವಿನಾಯಕ ಸಭಾಭವನದಲ್ಲಿ ನಡೆಯಿತು. ಬೆಳಿಗ್ಗೆ ಶ್ರೀ ಶಾರದಾ ದೇವಿಯ ಪ್ರತಿಷ್ಟೆ, ಗಣಹೋಮ ನಡೆಯಿತು. ನಂತರ ದ್ವಜಾರೋಹಣವನ್ನು ಉದಯ ಕುಮಾರ್ ಸರ್ವೆ ನೆರವೇರಿಸಿದರು. ಕೆಳಗಿನಕೇರಿ ಕೊಪ್ಪ ಶಾರದಾಂಬಾ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ಶ್ರೀ ಶಾರದಾ ದೇವಿಗೆ ಬೆಳ್ಳಿ ಕಿರೀಟ ಸಮರ್ಪಣೆ ನಡೆಯಿತು.

ನಂತರ ನಡೆದ ಧಾರ್ಮಿಕ ಸಭಾಕಾರ್ಯಕ್ರಮದಲ್ಲಿ ಕಾಟುಕುಕ್ಕೆ ಭಜನಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಹರಿಭಜನಾ ಸಂಕೀರ್ತನಕಾರ ರಾಮಕೃಷ್ಣ ಕಾಟುಕುಕ್ಕೆ ಧಾರ್ಮಿಕ ಉಪನ್ಯಾಸ ನೀಡಿ, ಹಬ್ಬಗಳು ನಮ್ಮನ್ನು ಒಂದುಗೂಡಿಸುತ್ತದೆ. ವೇದಗಳ ಅಧ್ಯಯನದಿಂದ ದೇವರು ಏನೆಂಬುದು ತಿಳಿಯಲು ಸಾಧ್ಯ. ಕಲಿಯುಗದಲ್ಲಿ ಭಗವಂತನ ನಾಮಸ್ಮರಣೆಗೆ ಮಹತ್ವವಿದ್ದು ಆತನ ನಾಮ ಸ್ಮರಣೆಯೇ ನಮಗೆ ಶಕ್ತಿ. ಸನಾತನ ಸಂಸ್ಕೃತಿಯ ಹಿಂದೂ ಧರ್ಮದಲ್ಲಿ ಸಾಮೂಹಿಕ ಆರಾಧನೆಗೆ ಹೆಚ್ಚು ಮಹತ್ವವಿದ್ದು, ಸಾಮೂಹಿಕ ಆರಾಧನಾ ಕೇಂದ್ರಗಳಿಗೆ ಎಲ್ಲರೂ ಮುಕ್ತವಾಗಿ ಪಾಲ್ಗೊಳ್ಳಬಹುದು. ಹಿಂದೂ ಧರ್ಮದ ಕುರಿತು ಎಲ್ಲರಿಗೂ ಪ್ರಾಥಮಿಕ ಶಿಕ್ಷಣದ ಅಗತ್ಯತೆ ಇದೆ. ಧರ್ಮದ ಬಗ್ಗೆ ಅರಿವಿರಬೇಕಾಗಿದೆ ಎಂದರು.

ಸವಣೂರು ಜಿನ ಬಸದಿಯ ಆಡಳಿತ ಮಂಡಳಿ ಅಧ್ಯಕ್ಷ ಬಿ. ಶತ್ರುಂಜಯ ಆರಿಗ ಮಾತನಾಡಿ, ಸಾಧಕನಿಗೆ ಆತನ ಸಾಧನೆಯೇ ಕಿರೀಟವಾಗಬೇಕು. ಧರ್ಮವೆಂದರೆ ಅದೊಂದು ಜೀವನ ಮಾರ್ಗ. ಧರ್ಮವನ್ನರಿತು ಬಾಳಿದರೆ ಅದರ ಮರ್ಮ ಅರಿಯಲು ಸಾಧ್ಯ. ಧರ್ಮವೆಂದರೆ ಮುಕ್ತಿಯೆಡೆಗೆ ಸಾಗುವ ದಾರಿ. ದೇವರ ಆರಾಧನೆ ಎಲ್ಲರೂ ಮಾಡಬಹುದು. ಹಿಂದೂ ಧರ್ಮ ಜಗತ್ತಿನ ಶ್ರೇಷ್ಠ ಧರ್ಮ ಎಂದರು.

ಸವಣೂರು ಶಾರದಾಂಬಾ ಸೇವಾ ಸಂಘದ ಗೌರವಾಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಅಧ್ಯಕ್ಷತೆ ವಹಿಸಿದ್ದರು.
ಶಾರದಾಂಬಾ ಸೇವಾ ಸಂಘದ ಸ್ಥಾಪಕಾಧ್ಯಕ್ಷ ಮೋಹನ್ ರೈ ಕೆರೆಕ್ಕೋಡಿ ಪ್ರಸ್ತಾವನೆಗೈದರು. ಅಧ್ಯಕ್ಷ ಸಂಪತ್ ಕುಮಾರ್ ಇಂದ್ರ ಸ್ವಾಗತಿಸಿದರು. ಕಾರ್ಯದರ್ಶಿ ಜತ್ತಪ್ಪ ಗೌಡ ಆರೇಲ್ತಡಿ ವಂದಿಸಿದರು. ಭವಹರಿ ರೈ ಪ್ರಾರ್ಥಿಸಿದರು. ರಾಕೇಶ್ ರೈ ಕೆಡೆಂಜಿ ನಿರೂಪಿಸಿದರು.

 

ಬೆಳ್ಳಿ ಕಿರೀಟಕ್ಕೆ 25 ಸಾವಿರ ದೇಣಿಗೆ ನೀಡಿದ ಸವಣೂರು ಕೆ.ಸೀತಾರಾಮ ರೈ ಸವಣೂರು ಮತ್ತು 22,222 ರೂ ನೀಡಿದ ಚಂದ್ರಕಲಾ ಮೋಹನ ರೈ ಕೆರೆಕ್ಕೋಡಿ ದಂಪತಿಗಳನ್ನು ವೇದಿಕೆಯಲ್ಲಿ ಸಮ್ಮಾನಿಸಲಾಯಿತು. ದೇಣಿಗೆ ನೀಡಿದ ದಾನಿಗಳನ್ನು ಶಾರದಾ ದೇವಿಯ ಸನ್ನಿದಿಯಲ್ಲಿ ಗೌರವಿಸಲಾಯಿತು. ನಂತರ ಮಹಾಪೂಜೆ , ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.ಶಾರದಾಂಬಾ ಸೇವಾ ಸಂಘದ ಉಪಾಧ್ಯಕ್ಷ ಬಾಲಚಂದ್ರ ರೈ ಕೆರೆಕ್ಕೋಡಿ, ಜತೆ ಕಾರ್ಯದರ್ಶಿ ದಯಾನಂದ ಬೇರಿಕೆ, ಕೋಶಾಧಿಕಾರಿ ವಸಂತ ರೈ ಸೊರಕೆ, ವೆಂಕಪ್ಪ ಗೌಡ ಅಡೀಲು, ಆದರ್ಶ ಜೆ ರೈ, ಗಿರಿಧರ ಗೌಡ ಮೆದು, ವಿಶ್ವನಾಥ ಮಡಿವಾಳ ಅತಿಥಿಗಳನ್ನು ಗೌರವಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬಲೆ ತೆಲಿಪಾಲೆ ಖ್ಯಾತಿಯ ಉಮೇಶ್ ಮಿಜಾರ್‍ತಂಡದಿಂದ ತೆಲಿಕೆದ ಗೊಂಚಿಲ್ ತುಳು ಹಾಸ್ಯ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸುಮಾರು 2 ಸಾವಿರಕ್ಕೂ ಮಿಕ್ಕಿ ಭಕ್ತಾದಿಗಳು ಪಾಲ್ಗೊಂಡಿದ್ದರು.


ಸಂಜೆ 5 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆಯ ಬಳಿಕ ಶಾರದಾ ಮೂರ್ತಿಯ ಶೋಭಾ ಯಾತ್ರೆ ಸವಣೂರಿನಿಂದ ಹೊರಟು ಪಣೆಮಜಲು, ಪೆರಿಯಡ್ಕ ಮೂಲಕ ಸರ್ವೆಯವರೆಗೆ ಸಾಗಿ ಸರ್ವೆ ಗೌರಿ ಹೊಳೆಯಲ್ಲಿ ಜಲಸ್ಥಂಬನ ನಡೆಯಿತು. ಪಣೆಮಜಲಿನಲ್ಲಿ ವಿನಾಯಕ ಫ್ರೆಂಡ್ಸ್ ಮತ್ತು ಗಣಪತಿ ಕಟ್ಟೆ ಪೂಜಾ ಸಮಿತಿ ಪೆರಿಯಡ್ಕದಲ್ಲಿ ಆದಿಶಕ್ತಿ ಭಜನಾ ಮಂಡಳಿಯ ವತಿಯಿಂದ ಭಕ್ತರಿಗೆ ಪಾನೀಯ ಮತ್ತು ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ಶಾಲಾ ಮಕ್ಕಳ ಕಣಿತ ಭಜನೆ ಹಾಗೂ ಕೇರಳ ಚೆಂಡೆ ಮೇಳ ಮೆರವಣಿಗೆಗೆ ವಿಶೇಷ ಮೆರುಗು ನೀಡಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

13 minutes ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

4 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

16 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

17 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

17 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

18 hours ago