Advertisement
ಸುದ್ದಿಗಳು

ಸವಣೂರು : ಶ್ರೀನಿವಾಸ ಕಲ್ಯಾಣ ಪೂರ್ವಭಾವಿ ಸಭೆ,ಸಮಿತಿ ರಚನೆ

Share

ಸವಣೂರು : ಆಲಂಕಾರು ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ರಜತ ಸಂಭ್ರಮದ ಸಮಾರೋಪ ಸಮಾರಂಭದ ಅಂಗವಾಗಿ ಮುಂದಿನ ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿದ್ದು,ಇದರ ಅಂಗವಾಗಿ ತಿರುಪತಿ ವೆಂಕಟರಮಣ ದೇವರ ಸನ್ನಿಧಿಯಿಂದಲೇ ದೇವರನ್ನು ಹಾಗೂ ಭಕ್ತ ತಂಡವನ್ನು ಬರಮಾಡಿಕೊಂಡು ನಡೆಸಲಾಗುವ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮದ ಪೂರ್ವ ತಯಾರಿಗಾಗಿ ಸವಣೂರು ವಲಯದ ಸಮಿತಿ ರಚನೆ ಹಾಗೂ ಪೂರ್ವ ಸಿದ್ದತಾ ಸಭೆಯು ಸವಣೂರು ಯುವಕ ಮಂಡಲದ ಯುವ ಸಭಾಭವನದಲ್ಲಿ ಶುಕ್ರವಾರ ನಡೆಯಿತು.

ಸಭೆಯಲ್ಲಿ ಆಲಂಕಾರು ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಡಾ.ಸುರೇಶ್ ಕುಮಾರ್ ಕೂಡೂರು ಮಾತನಾಡಿ, ಶ್ರೀ ಭಾರತಿ ಶಾಲೆಯ 25 ನೇ ವರ್ಷಾಚರಣೆಯ ಅಂಗವಾಗಿ ಸುಮಾರು 2.5 ಕೋಟಿ ವೆಚ್ಚದಲ್ಲಿ ಸಮಿತಿಯ ಅಧ್ಯಕ್ಷ ಕೃಷ್ಣ ಕುಮಾರ್ ಅತ್ರಿಜಾಲು ಅವರ ನೇತೃತ್ವದಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳು ಪ್ರಗತಿಯಲ್ಲಿದ್ದು, ರಜತ ಸಮಾರಂಭದ ಸಮಾರೋಪಕ್ಕೆ ಕೇಂದ್ರ ಸರಕಾರದ ಸಚಿವರು,ಧಾರ್ಮಿಕ ಮುಖಂಡರು ಪಾಲ್ಗೊಳ್ಳಲಿದ್ದಾರೆ.ಇದರ ಒಂದು ಭಾಗವಾಗಿ ವಿಶೇಷವಾದ ಶ್ರೀನಿವಾಸ ಕಲ್ಯಾಣ ಆಯೋಜನೆ ಕುರಿತು 9 ಗ್ರಾಮಗಳಲ್ಲಿ ಸಮಿತಿ ರಚಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕು ಎಂದರು.

ಶಾಲೆಯ ವತಿಯಿಂದ ಗ್ರಾಮದ ಜವಾಬ್ದಾರಿ ಗಂಗಾಧರ ಗೌಡ ಅವರು ಪ್ರಸ್ತಾವನೆಗೈದರು.ಕಾರ್ಯಕ್ರಮದಲ್ಲಿ ಆಲಂಕಾರು ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಸಂಚಾಲಕ ಈಶ್ವರ ಗೌಡ ಪಜ್ಜಡ್ಕ,ರಜತ ಸಂಭ್ರಮ ಸಮಿತಿ ಸದಸ್ಯರಾದ ಸುಂದರ ಗೌಡ,ಶ್ರೀಧರ ಬಲ್ಯಾಯ,ಈಶ್ವರ ಭಟ್,ಸುರೇಶ್ ಕುಂಡಡ್ಕ ಉಪಸ್ಥಿತರಿದ್ದರು.

ಸವಣೂರು ವಲಯ ಸಮಿತಿ ರಚನೆ : ಸಭೆಯಲ್ಲಿ ಸವಣೂರು ವಲಯದ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮದ ಸವಣೂರು ವಲಯ ಸಮಿತಿ ರಚಿಸಲಾಯಿತು.ಸಂಚಾಲಕರಾಗಿ ,ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಗಣೇಶ್ ಕೆಡೆಂಜಿ,ಕಾರ್ಯದರ್ಶಿಯಾಗಿ ತೀರ್ಥರಾಮ ಕೆಡೆಂಜಿ, ಸಹ ಸಂಚಾಲಕರಾಗಿ ಸವಣೂರು ಗ್ರಾ.ಪಂ.ಸದಸ್ಯರಾದ ಗಿರಿಶಂಕರ ಸುಲಾಯ,ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ಗಂಗಾಧರ ಪೆರಿಯಡ್ಕ,ಯುವಕ ಮಂಡಲದ ಕಾರ್ಯದರ್ಶಿ ಪ್ರವೀಣ್ ಚೆನ್ನಾವರ,ಸದಸ್ಯರಾಗಿ ಸವಣೂರು ಪ್ರಾ.ಕೃ.ಸ.ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ,ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಿ.ಸುಪ್ರಿತ್ ರೈ ಖಂಡಿಗ,ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ತಾ.ಪಂ.ಸದಸ್ಯೆ ರಾಜೇಶ್ವರಿ ಕನ್ಯಾಮಂಗಲ,ಗ್ರಾ.ಪಂ.ಸದಸ್ಯರಾದ ಪ್ರಕಾಶ್ ಕುದ್ಮನಮಜಲು,ರಾಜೀವಿ ಶೆಟ್ಟಿ,ಬಾಲಕೃಷ್ಣ ನಾಯ್ಕ ಕೆಡೆಂಜಿ,ಜಗದೀಶ ಆರೇಲ್ತಡಿ,ಗಣೇಶ್ ಮಡಿವಾಳ ಮಡಕೆ,ಜಯಂತ ಕುಲಾಲ್‌ವಿಶ್ವನಾಥ ಡೆಬ್ಬೆಲಿ ಅವರನ್ನು ಆಯ್ಕೆ ಮಾಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

21 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago