Advertisement
ಧಾರ್ಮಿಕ

ಸವಣೂರು ಶ್ರೀವಿಷ್ಣುಮೂರ್ತಿ ದೇವಸ್ಥಾನದ ಜಾತ್ರೆ, ಉಳ್ಳಾಲ್ತಿ ನೇಮ

Share

ಸವಣೂರು : ಸವಣೂರು ಶ್ರೀವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ ಫೆ.7 ಮತ್ತು 8ರಂದು ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.

ಫೆ.7ರಂದು ಬೆಳಿಗ್ಗೆ ತಂತ್ರಿಗಳ ಆಗಮನ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಮದ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಪರಿವಾರ ದೇವರುಗಳ ಪ್ರತಿಷ್ಠಾ ದಿನದ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಪಲ್ಲಪೂಜೆ ನಡೆಯಿತು. ಮದ್ಯಾಹ್ನ ಗೋಪಾಲಕೃಷ್ಣ ಬಡೆಕಿಲ್ಲಾಯ ಅವರ ಮನೆಯವರ ಸೇವಾರ್ಥವಾಗಿ ಅನ್ನಸಂತರ್ಪಣೆ ನಡೆಯಿತು. ಸಂಜೆ ದೀಪಾರಾಧನೆ, ತಾಯಂಬಕ ಸೇವೆ, ಮಹಾಪೂಜೆ, ಶ್ರೀ ದೇವರ ಬಲಿಹೊರಟು ಉತ್ಸವ, ಶ್ರೀ ಭೂತಬಲಿ, ವಸಂತ ಕಟ್ಟೆಪೂಜೆ, ಸುಡುಮದ್ದು ಪ್ರದರ್ಶನ ನಡೆಯಿತು.

ಫೆ.8ರಂದು ಬೆಳಿಗ್ಗೆ ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ವೈದಿಕ ಮಂತ್ರಾಕ್ಷತೆ ನಡೆಯಿತು. ಮದ್ಯಾಹ್ನ ಸವಣೂರು ಕೆ.ಸೀತಾರಾಮ ರೈ ಅವರ ಪುತ್ರ ಡಾ.ರಾಜೇಶ್ ರೈ ಸವಣೂರು ಅವರ ಸೇವಾರ್ಥ ಅನ್ನಸಂತರ್ಪಣೆ ನಡೆಯಿತು. ರಾತ್ರಿ ರಂಗಪೂಜೆ, ಉಳ್ಳಾಲ್ತಿ ದೈವಕ್ಕೆ ನೇಮೋತ್ಸವ ನಡೆಯಿತು. ಸವಣೂರು ಗುತ್ತು ಕುಟುಂಬಸ್ಥರ ಸೇವಾರ್ಥ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭ ಆಡಳಿತ ಸಮಿತಿ ಅಧ್ಯಕ್ಷ ವೆಂಕಪ್ಪ ಶೆಟ್ಟಿ ಸವಣೂರುಗುತ್ತು, ಆಡಳಿತದಾರ ಸವಣೂರುಗುತ್ತು ರತ್ನಾಕರ ಶೆಟ್ಟಿ, ಕೋಶಾಧಿಕಾರಿ ರವೀಂದ್ರನಾಥ ರೈ ನೋಲ್ಮೆ, ಉತ್ಸವ ಸಮಿತಿ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು, ಕಾರ್ಯದರ್ಶಿ ದಯಾನಂದ ಮಾಲೆತ್ತಾರು, ಪ್ರಧಾನ ಆರ್ಚಕ ಗೋಪಾಲಕೃಷ್ಣ ಬಡೆಕಿಲ್ಲಾಯ, ಸೇವಾ ಸಮಿತಿ ಅಧ್ಯಕ್ಷ ಉಮಾಪ್ರಸಾದ್ ರೈ ನಡುಬೈಲು , ಕಾರ್ಯದರ್ಶಿ ರಾಘವ ಗೌಡ ಸವಣೂರು, ಸೇವಾ ಸಮಿತಿ ಉಪಾಧ್ಯಕ್ಷ ಬೆಳಿಯಪ್ಪ ಗೌಡ ಚೌಕಿಮಠ, ಗಂಗಾಧರ ಸುಣ್ಣಾಜೆ, ಗ್ರಾಮದ ದೈವ ಶಿರಾಡಿ ದೈವದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರಜ್ವಲ ಕೆ.ಆರ್, ಕಾರ್ಯದರ್ಶಿ ಗಣೇಶ್ ಪಟ್ಟೆ ಮೊದಲಾದವರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

23 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

2 days ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago