ಸುಳ್ಯ: ಸುಳ್ಯ ತಾಲೂಕು ಸವಿತಾ ಸಮಾಜದ ಮಹಿಳಾ ಘಟಕದ ವತಿಯಿಂದ ಆಟಿ ವೈವಿಧ್ಯ ಕಾರ್ಯಕ್ರಮ ನಡೆಯಿತು.
ಸುಳ್ಯ ರಥಬೀದಿಯಲ್ಲಿರುವ ಟಿ.ಎ.ಪಿ.ಸಿ.ಎಂ.ಎಸ್. ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮ ಅಧ್ಯಕ್ಷತೆಯನ್ನು ಮಹಿಳಾ ಘಟಕದ ಅಧ್ಯಕ್ಷೆ ಇಂದಿರಾ ಪದ್ಮನಾಭ ವಹಿಸಿದ್ದರು. ಕಾರ್ಯದರ್ಶಿ ಭಾರತಿ ಬಂಟ್ವಾಳ್ ಆಟಿ ಕ್ವಿಜ್ ಕಾರ್ಯಕ್ರಮ ನಡೆಸಿಕೊಟ್ಟರು. ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಬಾರ್ಬರ್ಸ್ ಅಸೋಸಿಯೇಶನ್ ಅಧ್ಯಕ್ಷ ಪದ್ಮನಾಭ ಭಂಡಾರಿಯವರು ಹಾಗೂ ಸಮಾಜದ ಹಿರಿಯ ಮಹಿಳೆ ಸರಸ್ವತಿಯವರು ದೀಪ ಬೆಳಗಿ ಉದ್ಘಾಟಿಸಿದರು.
ಆಟಿ ಆಚರಣೆಯ ವಿಚಾರವಾಗಿ ಹರೀಶ್ ಬಂಟ್ವಾಳ್ ಮಾತನಾಡಿದರು. ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಗುರುರಾಜ ಅಜ್ಜಾವರ, ಕಾರ್ಯದರ್ಶಿ ಜಯಪ್ರಕಾಶ್ ಮಂಡಕೋಲು, ಗೌರವಾಧ್ಯಕ್ಷ ವಸಂತ ಮೂರಾಜೆ, ಮಹಿಳಾ ಘಟಕದ ಗೌರವಾಧ್ಯಕ್ಷೆ ಪಲ್ಲವಿ ಪ್ರದೀಪ್, ಯುವ ಘಟಕದ ಕಾರ್ಯದರ್ಶಿ ಉದಯ ಜಟ್ಟಿಪಳ್ಳ, ಖಜಾಂಚಿ ನವೀನ್ ಸೂಂತೋಡು, ಬಾರ್ಬರ್ಸ್ ಅಸೋಸಿಯೇಶನ್ ಕಾರ್ಯದರ್ಶಿ ಅವಿನಾಶ್ ಕೇರ್ಪಳ, ಖಜಾಂಚಿ ಧನು ಜಟ್ಟಿಪಳ್ಳ, ಮಹಿಳಾ ಘಟಕದ ಖಜಾಂಚಿ ಪ್ರಭಾ ಜಯನಗರ, ದ.ಕ.ಜಿಲ್ಲಾ ವಾದ್ಯಕಲಾವಿದ ಸಂಘದ ಅಧ್ಯಕ್ಷ ಬಾಲಚಂದ್ರ ಪೆರಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪುಷ್ಪಾ ಮೊರಂಗಲ್ಲು ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಸಮಾಜದ ಮಹಿಳೆಯರು ಮನೆಯಲ್ಲಿ ತಯಾರಿಸಿ ತಂದಿದ್ದ ವಿವಿಧ ಬಗೆಯ ಆಟಿ ಆಹಾರ ವೈವಿಧ್ಯವನ್ನು ಎಲ್ಲರೂ ಸೇರಿ ಸವಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…