ಸವಿತಾ ಸಮಾಜ | ಉದ್ಯೋಗ ಸಾಲ ಯೋಜನೆಗೆ ಅರ್ಜಿ ಆಹ್ವಾನ

July 11, 2020
11:37 AM

ಮಂಗಳೂರು : 2020-21ನೇ ಸಾಲಿನಲ್ಲಿ ಸವಿತಾ ಸಮಾಜಕ್ಕೆ ಸೇರಿದ ಪರಿಯಾಳ, ಅಂಬಟ್ಟನ್, ಬಜಂತ್ರಿ, ಬಂಡಾರಿ, ಚೌರಿಯ, ಹಡಪದ, ಕವುಟಿಯನ್, ಕೆಲಸಿ, ಕ್ಷೌರಿಕ, ಕ್ಷೌರದ್, ಮಹಾಲೆ, ಮಂಗಳ, ಮೇಲಗಾರ, ನಾಡಿಗ, ನಾಪಿತ, ನವಲಿಗ್, ನಾವಿ, ನಯನಜ ಕ್ಷತ್ರಿಯ, ನ್ಹಾವಿ, ವಾಜಾಂತ್ರಿ, ಸವಿತ, ನಯನಜ ಕ್ಷತ್ರಿ, ನಾಡಿಗ್, ಕ್ಷೌರಿಕ್, ಕ್ಷೌರಿಕ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ ಮತ್ತು ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ಸಾಲ ಮತ್ತು ಸಹಾಯಧನದ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Advertisement
Advertisement

ಈ ಮೇಲ್ಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವವರು ಅರ್ಜಿ ನಮೂನೆಯನ್ನು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಯಲ್ಲಿ ಅಥವಾ ನಿಗಮದ ವೆಬ್‍ಸೈಟ್‍ನಲ್ಲಿ ಪಡೆದು ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಫೋಟೋ ಮತ್ತು ಇತರೆ ದಾಖಲಾತಿಗಳನ್ನು ನಿಗಮದ ವೆಬ್‍ಸೈಟ್  ಮೂಲಕ ಆನ್‍ಲೈನ್‍ನಲ್ಲಿ ಅಥವಾ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಡನೆ  ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್, ಮಂಗಳೂರು ಕಚೇರಿಗೆ ಆಗಸ್ಟ್ 3 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ಕಚೇರಿಯನ್ನು ಅಥವಾ ನಿಗಮದ ಮೇಲ್ಕಂಡ ವೆಬ್‍ಸೈಟ್‍ನಲ್ಲಿ ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ
May 27, 2025
10:57 PM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ
May 23, 2025
10:27 PM
by: The Rural Mirror ಸುದ್ದಿಜಾಲ
ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮ
May 22, 2025
8:02 PM
by: The Rural Mirror ಸುದ್ದಿಜಾಲ
ವಿಕಸಿತ ಕೃಷಿ ಸಂಕಲ್ಪ ಅಭಿಯಾನ | ರೈತರ ಬಳಿಗೆ ಕೃಷಿ ವಿಜ್ಞಾನಿಗಳು‌ | ಹೊಸ ಯೋಜನೆ ರೈತರ ಬಳಿಗೆ |
May 19, 2025
10:15 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group