ಮಂಗಳೂರು : 2020-21ನೇ ಸಾಲಿನಲ್ಲಿ ಸವಿತಾ ಸಮಾಜಕ್ಕೆ ಸೇರಿದ ಪರಿಯಾಳ, ಅಂಬಟ್ಟನ್, ಬಜಂತ್ರಿ, ಬಂಡಾರಿ, ಚೌರಿಯ, ಹಡಪದ, ಕವುಟಿಯನ್, ಕೆಲಸಿ, ಕ್ಷೌರಿಕ, ಕ್ಷೌರದ್, ಮಹಾಲೆ, ಮಂಗಳ, ಮೇಲಗಾರ, ನಾಡಿಗ, ನಾಪಿತ, ನವಲಿಗ್, ನಾವಿ, ನಯನಜ ಕ್ಷತ್ರಿಯ, ನ್ಹಾವಿ, ವಾಜಾಂತ್ರಿ, ಸವಿತ, ನಯನಜ ಕ್ಷತ್ರಿ, ನಾಡಿಗ್, ಕ್ಷೌರಿಕ್, ಕ್ಷೌರಿಕ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ ಮತ್ತು ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ಸಾಲ ಮತ್ತು ಸಹಾಯಧನದ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಮೇಲ್ಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವವರು ಅರ್ಜಿ ನಮೂನೆಯನ್ನು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಯಲ್ಲಿ ಅಥವಾ ನಿಗಮದ ವೆಬ್ಸೈಟ್ನಲ್ಲಿ ಪಡೆದು ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಫೋಟೋ ಮತ್ತು ಇತರೆ ದಾಖಲಾತಿಗಳನ್ನು ನಿಗಮದ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅಥವಾ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಡನೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್, ಮಂಗಳೂರು ಕಚೇರಿಗೆ ಆಗಸ್ಟ್ 3 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ಕಚೇರಿಯನ್ನು ಅಥವಾ ನಿಗಮದ ಮೇಲ್ಕಂಡ ವೆಬ್ಸೈಟ್ನಲ್ಲಿ ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…
ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…
ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…
ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…
ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಕ್ರಾಂತಿ ಕೃತಕ ಬುದ್ಧಿಮತ್ತೆ (Artificial Intelligence) AI)ಮೂಲಕ…