ಮಂಗಳೂರು : 2020-21ನೇ ಸಾಲಿನಲ್ಲಿ ಸವಿತಾ ಸಮಾಜಕ್ಕೆ ಸೇರಿದ ಪರಿಯಾಳ, ಅಂಬಟ್ಟನ್, ಬಜಂತ್ರಿ, ಬಂಡಾರಿ, ಚೌರಿಯ, ಹಡಪದ, ಕವುಟಿಯನ್, ಕೆಲಸಿ, ಕ್ಷೌರಿಕ, ಕ್ಷೌರದ್, ಮಹಾಲೆ, ಮಂಗಳ, ಮೇಲಗಾರ, ನಾಡಿಗ, ನಾಪಿತ, ನವಲಿಗ್, ನಾವಿ, ನಯನಜ ಕ್ಷತ್ರಿಯ, ನ್ಹಾವಿ, ವಾಜಾಂತ್ರಿ, ಸವಿತ, ನಯನಜ ಕ್ಷತ್ರಿ, ನಾಡಿಗ್, ಕ್ಷೌರಿಕ್, ಕ್ಷೌರಿಕ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ ಮತ್ತು ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ಸಾಲ ಮತ್ತು ಸಹಾಯಧನದ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಮೇಲ್ಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವವರು ಅರ್ಜಿ ನಮೂನೆಯನ್ನು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಯಲ್ಲಿ ಅಥವಾ ನಿಗಮದ ವೆಬ್ಸೈಟ್ನಲ್ಲಿ ಪಡೆದು ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಫೋಟೋ ಮತ್ತು ಇತರೆ ದಾಖಲಾತಿಗಳನ್ನು ನಿಗಮದ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅಥವಾ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಡನೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್, ಮಂಗಳೂರು ಕಚೇರಿಗೆ ಆಗಸ್ಟ್ 3 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ಕಚೇರಿಯನ್ನು ಅಥವಾ ನಿಗಮದ ಮೇಲ್ಕಂಡ ವೆಬ್ಸೈಟ್ನಲ್ಲಿ ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…