ಮಂಗಳೂರು : 2020-21ನೇ ಸಾಲಿನಲ್ಲಿ ಸವಿತಾ ಸಮಾಜಕ್ಕೆ ಸೇರಿದ ಪರಿಯಾಳ, ಅಂಬಟ್ಟನ್, ಬಜಂತ್ರಿ, ಬಂಡಾರಿ, ಚೌರಿಯ, ಹಡಪದ, ಕವುಟಿಯನ್, ಕೆಲಸಿ, ಕ್ಷೌರಿಕ, ಕ್ಷೌರದ್, ಮಹಾಲೆ, ಮಂಗಳ, ಮೇಲಗಾರ, ನಾಡಿಗ, ನಾಪಿತ, ನವಲಿಗ್, ನಾವಿ, ನಯನಜ ಕ್ಷತ್ರಿಯ, ನ್ಹಾವಿ, ವಾಜಾಂತ್ರಿ, ಸವಿತ, ನಯನಜ ಕ್ಷತ್ರಿ, ನಾಡಿಗ್, ಕ್ಷೌರಿಕ್, ಕ್ಷೌರಿಕ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ ಮತ್ತು ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ಸಾಲ ಮತ್ತು ಸಹಾಯಧನದ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಮೇಲ್ಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವವರು ಅರ್ಜಿ ನಮೂನೆಯನ್ನು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಯಲ್ಲಿ ಅಥವಾ ನಿಗಮದ ವೆಬ್ಸೈಟ್ನಲ್ಲಿ ಪಡೆದು ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಫೋಟೋ ಮತ್ತು ಇತರೆ ದಾಖಲಾತಿಗಳನ್ನು ನಿಗಮದ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅಥವಾ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಡನೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್, ಮಂಗಳೂರು ಕಚೇರಿಗೆ ಆಗಸ್ಟ್ 3 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ಕಚೇರಿಯನ್ನು ಅಥವಾ ನಿಗಮದ ಮೇಲ್ಕಂಡ ವೆಬ್ಸೈಟ್ನಲ್ಲಿ ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…