ಸಹಕಾರಿ ಕ್ಷೇತ್ರದ ಚುನಾವಣೆ : ಐವರ್ನಾಡು, ಪಂಜ, ಅರಂತೋಡಿನಲ್ಲಿ ಅಚ್ಚರಿಯ ಗೆಲುವು…!

January 19, 2020
8:33 PM

ಸುಳ್ಯ: ತಾಲೂಕಿನ ಸಹಕಾರಿ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಭಾನುವಾರ ಚುನಾವಣೆ ನಡೆದ ಐವರ್ನಾಡು , ಪಂಜ, ಅರಂತೋಡುಗಳಲ್ಲಿ    ಅಚ್ಚರಿಯ ಗೆಲುವು ದಾಖಲಾಗಿದೆ. ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

Advertisement

ಐವರ್ನಾಡು ಸಹಕಾರಿ ಸಂಘದಲ್ಲಿ  ಎನ್ ಎನ್ ಮನ್ಮಥ ಸಹಿತ ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಚುನಾವಣೆಯಲ್ಲಿ  8 ಸ್ಥಾನಗಳನ್ನು ಗೆದ್ದುಕೊಂಡರೆ, ಈ ಹಿಂದೆ ಅವಿರೋಧವಾಗಿ 4 ಸ್ಥಾನಗಳನ್ನು  ಗೆಲ್ಲುವ ಮೂಲಕ ಒಟ್ಟು 12 ಸ್ಥಾನಗಳನ್ನೂ ಗೆದ್ದುಕೊಂಡಿದೆ.

ಪಂಜದಲ್ಲಿ ಚಂದ್ರಶೇಖರ ಶಾಸ್ತ್ರಿ ಸಹಿತ ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು   ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದೆ, ಎಲ್ಲಾ 12 ಸ್ಥಾನಗಳನ್ನೂ ಈ ತಂಡ ಗೆದ್ದಿದೆ.

ಅರಂತೋಡಿನಲ್ಲಿ ಸಂತೋಷ್ ಕುತ್ತಮೊಟ್ಟೆ ಸಹಿತ ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಈ ತಂಡದ ಎಲ್ಲರೂ ಸಹಕಾರ ಭಾರತಿ-ಬಿಜೆಪಿ ನೇತೃತ್ವದ ತಂಡ ಎಂದೇ ಹೇಳಿದೆ.

ಪಂಜದಲ್ಲಿ

ಸುಳ್ಯ ತಾಲೂಕಿನ ಇತಿಹಾಸದಲ್ಲಿ  ಬಿಜೆಪಿ-ಸಹಕಾರ ಭಾರತಿ ಅಥವಾ ಸಂಘಪರಿವಾರದ ಸಂಘಟನೆಯಿಂದಲೇ ಅಧಿಕೃತ ಅಭ್ಯರ್ಥಿಗಳಲ್ಲ ಎಂದು ಘೋಷಣೆ ಬಳಿಕವೂ ತಂಡವಾಗಿ ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಕಂಡಿರುವುದು ಅಚ್ಚರಿಗೆ ಕಾರಣವಾಗಿದೆ. ಸಂಘಟನಾತ್ಮಕವಾಗಿ ಬೆಳೆದಿರುವ ಸುಳ್ಯದ  ಸಹಕಾರಿ ಕ್ಷೇತ್ರವು ಬಿಜೆಪಿ-ಸಹಕಾರ ಭಾರತಿಯಲ್ಲಿ ಈಗ ವಿಘಟನೆಯ ಹಾದಿಯಲ್ಲಿ  ಸಾಗಿದೆಯೇ ಎಂಬ ಬಹುದೊಡ್ಡ ಪ್ರಶ್ನೆ ಈಗ ಇದೆ.

ಡಿಸಿಸಿ ಬ್ಯಾಂಕ್  ಅಡ್ಡಮತದಾನದ ಬಳಿಕ ಸುಳ್ಯದಲ್ಲಿ ಸಹಕಾರ ಭಾರತಿ-ಬಿಜೆಪಿಯಲ್ಲಿ ದೈವಸ್ಥಾನದಿಂದ ಆರಂಭವಾಗಿ ಕಾನೂನು ಚೌಕಟ್ಟು, ಸಂಘಟನೆಯ ನಿರ್ಧಾರದವರೆಗೆ  ನಡೆದ ವಿದ್ಯಮಾನಗಳು ಈಗ ಮತ್ತೊಮ್ಮೆ ಗೆಲುವು ಸಾಧಿಸುವವರೆಗೆ ತಲುಪಿದೆ. ಈ ಹಿಂದೆ ನೆಲ್ಲೂರು ಕೆಮ್ರಾಜೆಯಲ್ಲೂ ಇದೇ ರೀತಿ ನಡೆದಿತ್ತು.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಿರಾಡಿ ಘಾಟಿ | ರಾಷ್ಟ್ರೀಯ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ಮನವಿ
April 17, 2025
6:41 PM
by: The Rural Mirror ಸುದ್ದಿಜಾಲ
ಮಳೆಗಾಲ ಸಿದ್ಧತೆ | ಚರಂಡಿ ಹೂಳೆತ್ತಲು ಜಿಲ್ಲಾಧಿಕಾರಿ ಸೂಚನೆ
April 17, 2025
6:35 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 17-04-2025 | ಎ.20 ರಿಂದ ರಾಜ್ಯದ ವಿವಿದೆಡೆ ಮತ್ತೆ ಮಳೆ
April 17, 2025
4:50 PM
by: ಸಾಯಿಶೇಖರ್ ಕರಿಕಳ
ಪುತ್ತೂರು ಜಾತ್ರೆ ಎಂದರೆ “ನಮ್ಮ ಮನೆ ಉತ್ಸವ”
April 17, 2025
10:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group