Advertisement
ಸುದ್ದಿಗಳು

ಸಹಕಾರಿ ಕ್ಷೇತ್ರದ ಚುನಾವಣೆ : ಐವರ್ನಾಡು, ಪಂಜ, ಅರಂತೋಡಿನಲ್ಲಿ ಅಚ್ಚರಿಯ ಗೆಲುವು…!

Share

ಸುಳ್ಯ: ತಾಲೂಕಿನ ಸಹಕಾರಿ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಭಾನುವಾರ ಚುನಾವಣೆ ನಡೆದ ಐವರ್ನಾಡು , ಪಂಜ, ಅರಂತೋಡುಗಳಲ್ಲಿ    ಅಚ್ಚರಿಯ ಗೆಲುವು ದಾಖಲಾಗಿದೆ. ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

Advertisement

ಐವರ್ನಾಡು ಸಹಕಾರಿ ಸಂಘದಲ್ಲಿ  ಎನ್ ಎನ್ ಮನ್ಮಥ ಸಹಿತ ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಚುನಾವಣೆಯಲ್ಲಿ  8 ಸ್ಥಾನಗಳನ್ನು ಗೆದ್ದುಕೊಂಡರೆ, ಈ ಹಿಂದೆ ಅವಿರೋಧವಾಗಿ 4 ಸ್ಥಾನಗಳನ್ನು  ಗೆಲ್ಲುವ ಮೂಲಕ ಒಟ್ಟು 12 ಸ್ಥಾನಗಳನ್ನೂ ಗೆದ್ದುಕೊಂಡಿದೆ.

ಪಂಜದಲ್ಲಿ ಚಂದ್ರಶೇಖರ ಶಾಸ್ತ್ರಿ ಸಹಿತ ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು   ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದೆ, ಎಲ್ಲಾ 12 ಸ್ಥಾನಗಳನ್ನೂ ಈ ತಂಡ ಗೆದ್ದಿದೆ.

ಅರಂತೋಡಿನಲ್ಲಿ ಸಂತೋಷ್ ಕುತ್ತಮೊಟ್ಟೆ ಸಹಿತ ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಈ ತಂಡದ ಎಲ್ಲರೂ ಸಹಕಾರ ಭಾರತಿ-ಬಿಜೆಪಿ ನೇತೃತ್ವದ ತಂಡ ಎಂದೇ ಹೇಳಿದೆ.

ಪಂಜದಲ್ಲಿ

ಸುಳ್ಯ ತಾಲೂಕಿನ ಇತಿಹಾಸದಲ್ಲಿ  ಬಿಜೆಪಿ-ಸಹಕಾರ ಭಾರತಿ ಅಥವಾ ಸಂಘಪರಿವಾರದ ಸಂಘಟನೆಯಿಂದಲೇ ಅಧಿಕೃತ ಅಭ್ಯರ್ಥಿಗಳಲ್ಲ ಎಂದು ಘೋಷಣೆ ಬಳಿಕವೂ ತಂಡವಾಗಿ ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಕಂಡಿರುವುದು ಅಚ್ಚರಿಗೆ ಕಾರಣವಾಗಿದೆ. ಸಂಘಟನಾತ್ಮಕವಾಗಿ ಬೆಳೆದಿರುವ ಸುಳ್ಯದ  ಸಹಕಾರಿ ಕ್ಷೇತ್ರವು ಬಿಜೆಪಿ-ಸಹಕಾರ ಭಾರತಿಯಲ್ಲಿ ಈಗ ವಿಘಟನೆಯ ಹಾದಿಯಲ್ಲಿ  ಸಾಗಿದೆಯೇ ಎಂಬ ಬಹುದೊಡ್ಡ ಪ್ರಶ್ನೆ ಈಗ ಇದೆ.

ಡಿಸಿಸಿ ಬ್ಯಾಂಕ್  ಅಡ್ಡಮತದಾನದ ಬಳಿಕ ಸುಳ್ಯದಲ್ಲಿ ಸಹಕಾರ ಭಾರತಿ-ಬಿಜೆಪಿಯಲ್ಲಿ ದೈವಸ್ಥಾನದಿಂದ ಆರಂಭವಾಗಿ ಕಾನೂನು ಚೌಕಟ್ಟು, ಸಂಘಟನೆಯ ನಿರ್ಧಾರದವರೆಗೆ  ನಡೆದ ವಿದ್ಯಮಾನಗಳು ಈಗ ಮತ್ತೊಮ್ಮೆ ಗೆಲುವು ಸಾಧಿಸುವವರೆಗೆ ತಲುಪಿದೆ. ಈ ಹಿಂದೆ ನೆಲ್ಲೂರು ಕೆಮ್ರಾಜೆಯಲ್ಲೂ ಇದೇ ರೀತಿ ನಡೆದಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

3 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

8 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

8 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

8 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

20 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago