Advertisement
ಸುದ್ದಿಗಳು

ಸಹಕಾರಿ ಕ್ಷೇತ್ರದ ಚುನಾವಣೆ : ಐವರ್ನಾಡು, ಪಂಜ, ಅರಂತೋಡಿನಲ್ಲಿ ಅಚ್ಚರಿಯ ಗೆಲುವು…!

Share

ಸುಳ್ಯ: ತಾಲೂಕಿನ ಸಹಕಾರಿ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಭಾನುವಾರ ಚುನಾವಣೆ ನಡೆದ ಐವರ್ನಾಡು , ಪಂಜ, ಅರಂತೋಡುಗಳಲ್ಲಿ    ಅಚ್ಚರಿಯ ಗೆಲುವು ದಾಖಲಾಗಿದೆ. ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಐವರ್ನಾಡು ಸಹಕಾರಿ ಸಂಘದಲ್ಲಿ  ಎನ್ ಎನ್ ಮನ್ಮಥ ಸಹಿತ ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಚುನಾವಣೆಯಲ್ಲಿ  8 ಸ್ಥಾನಗಳನ್ನು ಗೆದ್ದುಕೊಂಡರೆ, ಈ ಹಿಂದೆ ಅವಿರೋಧವಾಗಿ 4 ಸ್ಥಾನಗಳನ್ನು  ಗೆಲ್ಲುವ ಮೂಲಕ ಒಟ್ಟು 12 ಸ್ಥಾನಗಳನ್ನೂ ಗೆದ್ದುಕೊಂಡಿದೆ.

ಪಂಜದಲ್ಲಿ ಚಂದ್ರಶೇಖರ ಶಾಸ್ತ್ರಿ ಸಹಿತ ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು   ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದೆ, ಎಲ್ಲಾ 12 ಸ್ಥಾನಗಳನ್ನೂ ಈ ತಂಡ ಗೆದ್ದಿದೆ.

ಅರಂತೋಡಿನಲ್ಲಿ ಸಂತೋಷ್ ಕುತ್ತಮೊಟ್ಟೆ ಸಹಿತ ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಈ ತಂಡದ ಎಲ್ಲರೂ ಸಹಕಾರ ಭಾರತಿ-ಬಿಜೆಪಿ ನೇತೃತ್ವದ ತಂಡ ಎಂದೇ ಹೇಳಿದೆ.

ಪಂಜದಲ್ಲಿ

ಸುಳ್ಯ ತಾಲೂಕಿನ ಇತಿಹಾಸದಲ್ಲಿ  ಬಿಜೆಪಿ-ಸಹಕಾರ ಭಾರತಿ ಅಥವಾ ಸಂಘಪರಿವಾರದ ಸಂಘಟನೆಯಿಂದಲೇ ಅಧಿಕೃತ ಅಭ್ಯರ್ಥಿಗಳಲ್ಲ ಎಂದು ಘೋಷಣೆ ಬಳಿಕವೂ ತಂಡವಾಗಿ ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಕಂಡಿರುವುದು ಅಚ್ಚರಿಗೆ ಕಾರಣವಾಗಿದೆ. ಸಂಘಟನಾತ್ಮಕವಾಗಿ ಬೆಳೆದಿರುವ ಸುಳ್ಯದ  ಸಹಕಾರಿ ಕ್ಷೇತ್ರವು ಬಿಜೆಪಿ-ಸಹಕಾರ ಭಾರತಿಯಲ್ಲಿ ಈಗ ವಿಘಟನೆಯ ಹಾದಿಯಲ್ಲಿ  ಸಾಗಿದೆಯೇ ಎಂಬ ಬಹುದೊಡ್ಡ ಪ್ರಶ್ನೆ ಈಗ ಇದೆ.

ಡಿಸಿಸಿ ಬ್ಯಾಂಕ್  ಅಡ್ಡಮತದಾನದ ಬಳಿಕ ಸುಳ್ಯದಲ್ಲಿ ಸಹಕಾರ ಭಾರತಿ-ಬಿಜೆಪಿಯಲ್ಲಿ ದೈವಸ್ಥಾನದಿಂದ ಆರಂಭವಾಗಿ ಕಾನೂನು ಚೌಕಟ್ಟು, ಸಂಘಟನೆಯ ನಿರ್ಧಾರದವರೆಗೆ  ನಡೆದ ವಿದ್ಯಮಾನಗಳು ಈಗ ಮತ್ತೊಮ್ಮೆ ಗೆಲುವು ಸಾಧಿಸುವವರೆಗೆ ತಲುಪಿದೆ. ಈ ಹಿಂದೆ ನೆಲ್ಲೂರು ಕೆಮ್ರಾಜೆಯಲ್ಲೂ ಇದೇ ರೀತಿ ನಡೆದಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago