Advertisement
ಸುದ್ದಿಗಳು

ಸಹಕಾರಿ ಕ್ಷೇತ್ರದ ಚುನಾವಣೆ : ಐವರ್ನಾಡು, ಪಂಜ, ಅರಂತೋಡಿನಲ್ಲಿ ಅಚ್ಚರಿಯ ಗೆಲುವು…!

Share

ಸುಳ್ಯ: ತಾಲೂಕಿನ ಸಹಕಾರಿ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಭಾನುವಾರ ಚುನಾವಣೆ ನಡೆದ ಐವರ್ನಾಡು , ಪಂಜ, ಅರಂತೋಡುಗಳಲ್ಲಿ    ಅಚ್ಚರಿಯ ಗೆಲುವು ದಾಖಲಾಗಿದೆ. ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಐವರ್ನಾಡು ಸಹಕಾರಿ ಸಂಘದಲ್ಲಿ  ಎನ್ ಎನ್ ಮನ್ಮಥ ಸಹಿತ ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಚುನಾವಣೆಯಲ್ಲಿ  8 ಸ್ಥಾನಗಳನ್ನು ಗೆದ್ದುಕೊಂಡರೆ, ಈ ಹಿಂದೆ ಅವಿರೋಧವಾಗಿ 4 ಸ್ಥಾನಗಳನ್ನು  ಗೆಲ್ಲುವ ಮೂಲಕ ಒಟ್ಟು 12 ಸ್ಥಾನಗಳನ್ನೂ ಗೆದ್ದುಕೊಂಡಿದೆ.

ಪಂಜದಲ್ಲಿ ಚಂದ್ರಶೇಖರ ಶಾಸ್ತ್ರಿ ಸಹಿತ ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು   ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದೆ, ಎಲ್ಲಾ 12 ಸ್ಥಾನಗಳನ್ನೂ ಈ ತಂಡ ಗೆದ್ದಿದೆ.

ಅರಂತೋಡಿನಲ್ಲಿ ಸಂತೋಷ್ ಕುತ್ತಮೊಟ್ಟೆ ಸಹಿತ ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಈ ತಂಡದ ಎಲ್ಲರೂ ಸಹಕಾರ ಭಾರತಿ-ಬಿಜೆಪಿ ನೇತೃತ್ವದ ತಂಡ ಎಂದೇ ಹೇಳಿದೆ.

ಪಂಜದಲ್ಲಿ

ಸುಳ್ಯ ತಾಲೂಕಿನ ಇತಿಹಾಸದಲ್ಲಿ  ಬಿಜೆಪಿ-ಸಹಕಾರ ಭಾರತಿ ಅಥವಾ ಸಂಘಪರಿವಾರದ ಸಂಘಟನೆಯಿಂದಲೇ ಅಧಿಕೃತ ಅಭ್ಯರ್ಥಿಗಳಲ್ಲ ಎಂದು ಘೋಷಣೆ ಬಳಿಕವೂ ತಂಡವಾಗಿ ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಕಂಡಿರುವುದು ಅಚ್ಚರಿಗೆ ಕಾರಣವಾಗಿದೆ. ಸಂಘಟನಾತ್ಮಕವಾಗಿ ಬೆಳೆದಿರುವ ಸುಳ್ಯದ  ಸಹಕಾರಿ ಕ್ಷೇತ್ರವು ಬಿಜೆಪಿ-ಸಹಕಾರ ಭಾರತಿಯಲ್ಲಿ ಈಗ ವಿಘಟನೆಯ ಹಾದಿಯಲ್ಲಿ  ಸಾಗಿದೆಯೇ ಎಂಬ ಬಹುದೊಡ್ಡ ಪ್ರಶ್ನೆ ಈಗ ಇದೆ.

ಡಿಸಿಸಿ ಬ್ಯಾಂಕ್  ಅಡ್ಡಮತದಾನದ ಬಳಿಕ ಸುಳ್ಯದಲ್ಲಿ ಸಹಕಾರ ಭಾರತಿ-ಬಿಜೆಪಿಯಲ್ಲಿ ದೈವಸ್ಥಾನದಿಂದ ಆರಂಭವಾಗಿ ಕಾನೂನು ಚೌಕಟ್ಟು, ಸಂಘಟನೆಯ ನಿರ್ಧಾರದವರೆಗೆ  ನಡೆದ ವಿದ್ಯಮಾನಗಳು ಈಗ ಮತ್ತೊಮ್ಮೆ ಗೆಲುವು ಸಾಧಿಸುವವರೆಗೆ ತಲುಪಿದೆ. ಈ ಹಿಂದೆ ನೆಲ್ಲೂರು ಕೆಮ್ರಾಜೆಯಲ್ಲೂ ಇದೇ ರೀತಿ ನಡೆದಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

27 minutes ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

1 hour ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

4 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

5 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

8 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

17 hours ago