Advertisement
ಸುದ್ದಿಗಳು

ಸಹಕಾರಿ ಕ್ಷೇತ್ರದ ಚುನಾವಣೆ : ಐವರ್ನಾಡು, ಪಂಜ, ಅರಂತೋಡಿನಲ್ಲಿ ಅಚ್ಚರಿಯ ಗೆಲುವು…!

Share

ಸುಳ್ಯ: ತಾಲೂಕಿನ ಸಹಕಾರಿ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಭಾನುವಾರ ಚುನಾವಣೆ ನಡೆದ ಐವರ್ನಾಡು , ಪಂಜ, ಅರಂತೋಡುಗಳಲ್ಲಿ    ಅಚ್ಚರಿಯ ಗೆಲುವು ದಾಖಲಾಗಿದೆ. ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಐವರ್ನಾಡು ಸಹಕಾರಿ ಸಂಘದಲ್ಲಿ  ಎನ್ ಎನ್ ಮನ್ಮಥ ಸಹಿತ ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಚುನಾವಣೆಯಲ್ಲಿ  8 ಸ್ಥಾನಗಳನ್ನು ಗೆದ್ದುಕೊಂಡರೆ, ಈ ಹಿಂದೆ ಅವಿರೋಧವಾಗಿ 4 ಸ್ಥಾನಗಳನ್ನು  ಗೆಲ್ಲುವ ಮೂಲಕ ಒಟ್ಟು 12 ಸ್ಥಾನಗಳನ್ನೂ ಗೆದ್ದುಕೊಂಡಿದೆ.

ಪಂಜದಲ್ಲಿ ಚಂದ್ರಶೇಖರ ಶಾಸ್ತ್ರಿ ಸಹಿತ ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು   ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದೆ, ಎಲ್ಲಾ 12 ಸ್ಥಾನಗಳನ್ನೂ ಈ ತಂಡ ಗೆದ್ದಿದೆ.

ಅರಂತೋಡಿನಲ್ಲಿ ಸಂತೋಷ್ ಕುತ್ತಮೊಟ್ಟೆ ಸಹಿತ ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಈ ತಂಡದ ಎಲ್ಲರೂ ಸಹಕಾರ ಭಾರತಿ-ಬಿಜೆಪಿ ನೇತೃತ್ವದ ತಂಡ ಎಂದೇ ಹೇಳಿದೆ.

ಪಂಜದಲ್ಲಿ

ಸುಳ್ಯ ತಾಲೂಕಿನ ಇತಿಹಾಸದಲ್ಲಿ  ಬಿಜೆಪಿ-ಸಹಕಾರ ಭಾರತಿ ಅಥವಾ ಸಂಘಪರಿವಾರದ ಸಂಘಟನೆಯಿಂದಲೇ ಅಧಿಕೃತ ಅಭ್ಯರ್ಥಿಗಳಲ್ಲ ಎಂದು ಘೋಷಣೆ ಬಳಿಕವೂ ತಂಡವಾಗಿ ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಕಂಡಿರುವುದು ಅಚ್ಚರಿಗೆ ಕಾರಣವಾಗಿದೆ. ಸಂಘಟನಾತ್ಮಕವಾಗಿ ಬೆಳೆದಿರುವ ಸುಳ್ಯದ  ಸಹಕಾರಿ ಕ್ಷೇತ್ರವು ಬಿಜೆಪಿ-ಸಹಕಾರ ಭಾರತಿಯಲ್ಲಿ ಈಗ ವಿಘಟನೆಯ ಹಾದಿಯಲ್ಲಿ  ಸಾಗಿದೆಯೇ ಎಂಬ ಬಹುದೊಡ್ಡ ಪ್ರಶ್ನೆ ಈಗ ಇದೆ.

ಡಿಸಿಸಿ ಬ್ಯಾಂಕ್  ಅಡ್ಡಮತದಾನದ ಬಳಿಕ ಸುಳ್ಯದಲ್ಲಿ ಸಹಕಾರ ಭಾರತಿ-ಬಿಜೆಪಿಯಲ್ಲಿ ದೈವಸ್ಥಾನದಿಂದ ಆರಂಭವಾಗಿ ಕಾನೂನು ಚೌಕಟ್ಟು, ಸಂಘಟನೆಯ ನಿರ್ಧಾರದವರೆಗೆ  ನಡೆದ ವಿದ್ಯಮಾನಗಳು ಈಗ ಮತ್ತೊಮ್ಮೆ ಗೆಲುವು ಸಾಧಿಸುವವರೆಗೆ ತಲುಪಿದೆ. ಈ ಹಿಂದೆ ನೆಲ್ಲೂರು ಕೆಮ್ರಾಜೆಯಲ್ಲೂ ಇದೇ ರೀತಿ ನಡೆದಿತ್ತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

3 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

3 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

11 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

11 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago