Advertisement
ಸುದ್ದಿಗಳು

ಸಹಕಾರಿ ಕ್ಷೇತ್ರದ ಚುನಾವಣೆ : ಐವರ್ನಾಡು, ಪಂಜ, ಅರಂತೋಡಿನಲ್ಲಿ ಅಚ್ಚರಿಯ ಗೆಲುವು…!

Share

ಸುಳ್ಯ: ತಾಲೂಕಿನ ಸಹಕಾರಿ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಭಾನುವಾರ ಚುನಾವಣೆ ನಡೆದ ಐವರ್ನಾಡು , ಪಂಜ, ಅರಂತೋಡುಗಳಲ್ಲಿ    ಅಚ್ಚರಿಯ ಗೆಲುವು ದಾಖಲಾಗಿದೆ. ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಐವರ್ನಾಡು ಸಹಕಾರಿ ಸಂಘದಲ್ಲಿ  ಎನ್ ಎನ್ ಮನ್ಮಥ ಸಹಿತ ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಚುನಾವಣೆಯಲ್ಲಿ  8 ಸ್ಥಾನಗಳನ್ನು ಗೆದ್ದುಕೊಂಡರೆ, ಈ ಹಿಂದೆ ಅವಿರೋಧವಾಗಿ 4 ಸ್ಥಾನಗಳನ್ನು  ಗೆಲ್ಲುವ ಮೂಲಕ ಒಟ್ಟು 12 ಸ್ಥಾನಗಳನ್ನೂ ಗೆದ್ದುಕೊಂಡಿದೆ.

ಪಂಜದಲ್ಲಿ ಚಂದ್ರಶೇಖರ ಶಾಸ್ತ್ರಿ ಸಹಿತ ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು   ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದೆ, ಎಲ್ಲಾ 12 ಸ್ಥಾನಗಳನ್ನೂ ಈ ತಂಡ ಗೆದ್ದಿದೆ.

ಅರಂತೋಡಿನಲ್ಲಿ ಸಂತೋಷ್ ಕುತ್ತಮೊಟ್ಟೆ ಸಹಿತ ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಈ ತಂಡದ ಎಲ್ಲರೂ ಸಹಕಾರ ಭಾರತಿ-ಬಿಜೆಪಿ ನೇತೃತ್ವದ ತಂಡ ಎಂದೇ ಹೇಳಿದೆ.

ಪಂಜದಲ್ಲಿ

ಸುಳ್ಯ ತಾಲೂಕಿನ ಇತಿಹಾಸದಲ್ಲಿ  ಬಿಜೆಪಿ-ಸಹಕಾರ ಭಾರತಿ ಅಥವಾ ಸಂಘಪರಿವಾರದ ಸಂಘಟನೆಯಿಂದಲೇ ಅಧಿಕೃತ ಅಭ್ಯರ್ಥಿಗಳಲ್ಲ ಎಂದು ಘೋಷಣೆ ಬಳಿಕವೂ ತಂಡವಾಗಿ ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಕಂಡಿರುವುದು ಅಚ್ಚರಿಗೆ ಕಾರಣವಾಗಿದೆ. ಸಂಘಟನಾತ್ಮಕವಾಗಿ ಬೆಳೆದಿರುವ ಸುಳ್ಯದ  ಸಹಕಾರಿ ಕ್ಷೇತ್ರವು ಬಿಜೆಪಿ-ಸಹಕಾರ ಭಾರತಿಯಲ್ಲಿ ಈಗ ವಿಘಟನೆಯ ಹಾದಿಯಲ್ಲಿ  ಸಾಗಿದೆಯೇ ಎಂಬ ಬಹುದೊಡ್ಡ ಪ್ರಶ್ನೆ ಈಗ ಇದೆ.

ಡಿಸಿಸಿ ಬ್ಯಾಂಕ್  ಅಡ್ಡಮತದಾನದ ಬಳಿಕ ಸುಳ್ಯದಲ್ಲಿ ಸಹಕಾರ ಭಾರತಿ-ಬಿಜೆಪಿಯಲ್ಲಿ ದೈವಸ್ಥಾನದಿಂದ ಆರಂಭವಾಗಿ ಕಾನೂನು ಚೌಕಟ್ಟು, ಸಂಘಟನೆಯ ನಿರ್ಧಾರದವರೆಗೆ  ನಡೆದ ವಿದ್ಯಮಾನಗಳು ಈಗ ಮತ್ತೊಮ್ಮೆ ಗೆಲುವು ಸಾಧಿಸುವವರೆಗೆ ತಲುಪಿದೆ. ಈ ಹಿಂದೆ ನೆಲ್ಲೂರು ಕೆಮ್ರಾಜೆಯಲ್ಲೂ ಇದೇ ರೀತಿ ನಡೆದಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

16 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago