Advertisement
ಸುದ್ದಿಗಳು

ಸಹಕಾರಿ ಕ್ಷೇತ್ರದ ಚುನಾವಣೆ : ಐವರ್ನಾಡು, ಪಂಜ, ಅರಂತೋಡಿನಲ್ಲಿ ಅಚ್ಚರಿಯ ಗೆಲುವು…!

Share

ಸುಳ್ಯ: ತಾಲೂಕಿನ ಸಹಕಾರಿ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಭಾನುವಾರ ಚುನಾವಣೆ ನಡೆದ ಐವರ್ನಾಡು , ಪಂಜ, ಅರಂತೋಡುಗಳಲ್ಲಿ    ಅಚ್ಚರಿಯ ಗೆಲುವು ದಾಖಲಾಗಿದೆ. ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಐವರ್ನಾಡು ಸಹಕಾರಿ ಸಂಘದಲ್ಲಿ  ಎನ್ ಎನ್ ಮನ್ಮಥ ಸಹಿತ ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಚುನಾವಣೆಯಲ್ಲಿ  8 ಸ್ಥಾನಗಳನ್ನು ಗೆದ್ದುಕೊಂಡರೆ, ಈ ಹಿಂದೆ ಅವಿರೋಧವಾಗಿ 4 ಸ್ಥಾನಗಳನ್ನು  ಗೆಲ್ಲುವ ಮೂಲಕ ಒಟ್ಟು 12 ಸ್ಥಾನಗಳನ್ನೂ ಗೆದ್ದುಕೊಂಡಿದೆ.

ಪಂಜದಲ್ಲಿ ಚಂದ್ರಶೇಖರ ಶಾಸ್ತ್ರಿ ಸಹಿತ ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು   ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದೆ, ಎಲ್ಲಾ 12 ಸ್ಥಾನಗಳನ್ನೂ ಈ ತಂಡ ಗೆದ್ದಿದೆ.

ಅರಂತೋಡಿನಲ್ಲಿ ಸಂತೋಷ್ ಕುತ್ತಮೊಟ್ಟೆ ಸಹಿತ ಸಹಕಾರ ಭಾರತಿ-ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಈ ತಂಡದ ಎಲ್ಲರೂ ಸಹಕಾರ ಭಾರತಿ-ಬಿಜೆಪಿ ನೇತೃತ್ವದ ತಂಡ ಎಂದೇ ಹೇಳಿದೆ.

ಪಂಜದಲ್ಲಿ

ಸುಳ್ಯ ತಾಲೂಕಿನ ಇತಿಹಾಸದಲ್ಲಿ  ಬಿಜೆಪಿ-ಸಹಕಾರ ಭಾರತಿ ಅಥವಾ ಸಂಘಪರಿವಾರದ ಸಂಘಟನೆಯಿಂದಲೇ ಅಧಿಕೃತ ಅಭ್ಯರ್ಥಿಗಳಲ್ಲ ಎಂದು ಘೋಷಣೆ ಬಳಿಕವೂ ತಂಡವಾಗಿ ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಕಂಡಿರುವುದು ಅಚ್ಚರಿಗೆ ಕಾರಣವಾಗಿದೆ. ಸಂಘಟನಾತ್ಮಕವಾಗಿ ಬೆಳೆದಿರುವ ಸುಳ್ಯದ  ಸಹಕಾರಿ ಕ್ಷೇತ್ರವು ಬಿಜೆಪಿ-ಸಹಕಾರ ಭಾರತಿಯಲ್ಲಿ ಈಗ ವಿಘಟನೆಯ ಹಾದಿಯಲ್ಲಿ  ಸಾಗಿದೆಯೇ ಎಂಬ ಬಹುದೊಡ್ಡ ಪ್ರಶ್ನೆ ಈಗ ಇದೆ.

ಡಿಸಿಸಿ ಬ್ಯಾಂಕ್  ಅಡ್ಡಮತದಾನದ ಬಳಿಕ ಸುಳ್ಯದಲ್ಲಿ ಸಹಕಾರ ಭಾರತಿ-ಬಿಜೆಪಿಯಲ್ಲಿ ದೈವಸ್ಥಾನದಿಂದ ಆರಂಭವಾಗಿ ಕಾನೂನು ಚೌಕಟ್ಟು, ಸಂಘಟನೆಯ ನಿರ್ಧಾರದವರೆಗೆ  ನಡೆದ ವಿದ್ಯಮಾನಗಳು ಈಗ ಮತ್ತೊಮ್ಮೆ ಗೆಲುವು ಸಾಧಿಸುವವರೆಗೆ ತಲುಪಿದೆ. ಈ ಹಿಂದೆ ನೆಲ್ಲೂರು ಕೆಮ್ರಾಜೆಯಲ್ಲೂ ಇದೇ ರೀತಿ ನಡೆದಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

5 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

7 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

14 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

16 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

22 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

1 day ago