Advertisement
ಅನುಕ್ರಮ

ಸಹಕಾರಿ ಸಪ್ತಾಹ : ಸಹಕಾರಿ ಕ್ಷೇತ್ರದ ಅರಿವು : ಭಾಗ-2

Share

ಸಂಸ್ಥೆಯಲ್ಲಿರುವ ಸಾಲ, ಠೇವಣಾತಿ ಚಟುವಟಿಕೆಗಳಿಲ್ಲದೇ ಇನ್ನಿತರ ಎಲ್ಲಾ ವ್ಯವಹಾರಗಳಲ್ಲಿ ಸದಸ್ಯ ತೊಡಗಿಸಿಕೊಳ್ಳುವುದು ಆತನ ಬದ್ಧತೆ.

ಕೆಲವೊಂದು ಸದಸ್ಯರಿಗೆ ಸಂಘದ ಚೌಕಟ್ಟಿನ ಬಗ್ಗೆ ಪರಿಚಯವಾಗಲಿ, ಮಹಾಸಭೆಯಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಲು ಆಗಲಿ ತಿಳುವಳಿಕೆ ಇರುವುದಿಲ್ಲ. ಸಂಘದ ಬೈಲಾಗಳನ್ನು ಸದಸ್ಯರಿಗೆ ಪಡಕೊಳ್ಳಲು ಕಾನೂನಿನಲ್ಲಿ ಅವಕಾಶವಿದ್ದು, ಅದನ್ನು ಪಡೆದು ಅಧ್ಯಯನ ನಡೆಸಬೇಕು. ಹಲವು ವಿಷಯಗಳು ಬೈಲಾ ಅಧ್ಯಯನದಿಂದ ಮನನವಾಗುತ್ತದೆ. ಅವಶ್ಯಕ
ಎಂದು ಕಂಡುಬಂದಲ್ಲಿ ಸಹಕಾರಿ ತಜ್ಞರ ಮೂಲಕ ಬೈಲಾ ಬಗ್ಗೆ ಆಗಲೀ ಸಹಕಾರಿ ಕಾನೂನು, ನಿಯಮ ಬಗ್ಗೆಯಾಗಲೀ ಸದಸ್ಯರು ಚರ್ಚಿಸುವ ರೂಢಿ ರೂಪಿಸಿಕೊಳ್ಳಬೇಕು.
ಸಹಕಾರಿ ಸಂಘಗಳ ಕಾಯ್ದೆ, ನಿಯಮ, ಉಪವಿಧಿಗಳಿಗೊಳಪಟ್ಟು ಸಂಘದಲ್ಲಿ ಅಂತಿಮ ಅಧಿಕಾರವು ಸರ್ವ ಸದಸ್ಯರದ್ದಾಗಿರುತ್ತದೆ. ಕಾಯ್ದೆಯಲ್ಲಿ ತಿಳಿಸಿದಂತೆ ಸದಸ್ಯರ ಮಹಾಸಭೆಯನ್ನು ಜರಗಿಸುವ ಪ್ರಕ್ರಿಯೆಗಳು ಈ ರೀತಿ ಇರುತ್ತದೆ.

ಸರ್ವ ಸದಸ್ಯರ ಸಭೆ (ಮಹಾಸಭೆ)ಯನ್ನು ವರ್ಷಾಂತ್ಯವಾಗಿ (ಮಾರ್ಚ್ 31) ಆರು ತಿಂಗಳೊಳಗೆ (ಸೆಪ್ಟೆಂಬರ್ 25ರೊಳಗೆ) ಕಡ್ಡಾಯವಾಗಿ ಜರಗಿಸತಕ್ಕದ್ದು.
ವರ್ಷಾಂತ್ಯದ ಬಳಿಕ ಮೇ ಅಂತ್ಯದೊಳಗೆ ಸಂಘದ ವಾರ್ಷಿಕ ಲೆಕ್ಕಪತ್ರಗಳನ್ನು ಅಂತಿಮಗೊಳಿಸಿ ನಿರ್ಣಯಪಡಿಸಿದ ಲೆಕ್ಕ ಪರಿಶೋಧಕರಿಗೆ ಪರಿಶೋಧನೆಗಾಗಿ ಒಪ್ಪಿಸತಕ್ಕದ್ದು, ಲೆಕ್ಕ ಪರಿಶೋಧಕರು ಪರಿಶೋಧನೆ ನಡೆಸಿ ತಮ್ಮ ಅಂತಿಮ ವರದಿಯನ್ನು ಅಗೋಸ್ತು ಅಂತ್ಯದೊಳಗೆ ಸಂಘಕ್ಕೆ ಸಲ್ಲಿಸತಕ್ಕದ್ದು, ಪರಿಶೋಧಿತ ಲೆಕ್ಕ ಪತ್ರಗಳು ಕೂಡಾ ವಾರ್ಷಿಕ
ಮಹಾಸಭೆಯ ಕಾರ್ಯಸೂಚಿಯ ಭಾಗವಾಗಿರುತ್ತದೆ. ಆಡಳಿತ ಮಂಡಳಿಯು ವಾರ್ಷಿಕ ಮಹಾಸಭೆ ಜರುಗಿಸಲು ಅವಕಾಶವಿರುವ ಅಂತಿಮ ದಿನಾಂಕಕ್ಕೆ 3 ತಿಂಗಳ ಮುಂಚಿತವಾಗಿ ಮಹಾಸಭೆ ಜರುಗಿಸುವ ದಿನಾಂಕವನ್ನು ನಿರ್ಣಯಿಸಬೇಕು. ವಾರ್ಷಿಕ ಮಹಾಸಭೆಯಲ್ಲಿ ಕಾಯ್ದೆ ಕಲಂ 27ರಲ್ಲಿ ಹೇಳಿದ ಕಾರ್ಯಸೂಚಿಗಳನ್ನು ಚರ್ಚಿಸಿ, ವಿಮರ್ಶಿಸಿ ನಿರ್ಣಯ ಕೈಗೊಳ್ಳುವುದು.

ಒಂದು ಸಹಕಾರಿ ಸಂಘದಲ್ಲಿ ವಾರ್ಷಿಕ ಮಹಾಸಭೆಯು ಮಹತ್ವಪೂರ್ಣ ಅಂತಿಮ ಅಧಿಕಾರ ಹೊಂದಿರುವ ಸಭೆಯಾಗಿರುವುದರಿಂದ ಸದಸ್ಯರು ಇದರಲ್ಲಿ ಸಕ್ರೀಯವಾಗಿ ಭಾಗವಹಿಸಿ ಸಂಘದ ವ್ಯವಹಾರದ ಆಗು ಹೋಗುಗಳನ್ನು ಮನನ ಮಾಡಿಕೊಳ್ಳುವ ಅನಿವಾರ್ಯತೆ ಸಂಘದ ಆರೋಗ್ಯಕರ ಬೆಳವಣಿಗೆ ದೃಷ್ಟಿಯಿಂದ ತೀರಾ ಅಗತ್ಯವಿದೆ. ಸಾಮಾನ್ಯವಾಗಿ
ಸೆಪ್ಟೆಂಬರ ತಿಂಗಳು ಸಹಕಾರಿ ಸಂಘಗಳ ಮಹಾಸಭೆಯ ದಿನಗಳು, ಸಾಮಾನ್ಯ ಸದಸ್ಯರು ಸಂಘದಿಂದ ದೊರೆಯುವ ಸಾಲ ಸೌಲಭ್ಯಗಳ ಕಡೆ ಮಾತ್ರ ಗಮನ ಹರಿಸುತ್ತಾರೆ ಹೊರತು ಮಹಾಸಭೆಯ ಮಹತ್ವ ಅದರಲ್ಲಿ ಚರ್ಚಿಸುವ, ಪಾಲ್ಗೊಳ್ಳುವ ಅಗತ್ಯತೆಯ ಅರಿವು ಹೊಂದಿರುವುದಿಲ್ಲ.

(…. ಮುಂದುವರಿಯುತ್ತದೆ…)

ಭಾಗ-1 : https://theruralmirror.com/?p=15514

ಬರಹ :

ರಾಧಾಕೃಷ್ಣ ಕೋಟೆ, ಹಿರಿಯ ಸಹಕಾರಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

2 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

2 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

6 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

6 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

9 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

18 hours ago