Advertisement
ಅನುಕ್ರಮ

ಸಹಕಾರಿ ಸಪ್ತಾಹ : ಸಹಕಾರಿ ಕ್ಷೇತ್ರದ ಅರಿವು : ಭಾಗ-2

Share

ಸಂಸ್ಥೆಯಲ್ಲಿರುವ ಸಾಲ, ಠೇವಣಾತಿ ಚಟುವಟಿಕೆಗಳಿಲ್ಲದೇ ಇನ್ನಿತರ ಎಲ್ಲಾ ವ್ಯವಹಾರಗಳಲ್ಲಿ ಸದಸ್ಯ ತೊಡಗಿಸಿಕೊಳ್ಳುವುದು ಆತನ ಬದ್ಧತೆ.

ಕೆಲವೊಂದು ಸದಸ್ಯರಿಗೆ ಸಂಘದ ಚೌಕಟ್ಟಿನ ಬಗ್ಗೆ ಪರಿಚಯವಾಗಲಿ, ಮಹಾಸಭೆಯಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಲು ಆಗಲಿ ತಿಳುವಳಿಕೆ ಇರುವುದಿಲ್ಲ. ಸಂಘದ ಬೈಲಾಗಳನ್ನು ಸದಸ್ಯರಿಗೆ ಪಡಕೊಳ್ಳಲು ಕಾನೂನಿನಲ್ಲಿ ಅವಕಾಶವಿದ್ದು, ಅದನ್ನು ಪಡೆದು ಅಧ್ಯಯನ ನಡೆಸಬೇಕು. ಹಲವು ವಿಷಯಗಳು ಬೈಲಾ ಅಧ್ಯಯನದಿಂದ ಮನನವಾಗುತ್ತದೆ. ಅವಶ್ಯಕ
ಎಂದು ಕಂಡುಬಂದಲ್ಲಿ ಸಹಕಾರಿ ತಜ್ಞರ ಮೂಲಕ ಬೈಲಾ ಬಗ್ಗೆ ಆಗಲೀ ಸಹಕಾರಿ ಕಾನೂನು, ನಿಯಮ ಬಗ್ಗೆಯಾಗಲೀ ಸದಸ್ಯರು ಚರ್ಚಿಸುವ ರೂಢಿ ರೂಪಿಸಿಕೊಳ್ಳಬೇಕು.
ಸಹಕಾರಿ ಸಂಘಗಳ ಕಾಯ್ದೆ, ನಿಯಮ, ಉಪವಿಧಿಗಳಿಗೊಳಪಟ್ಟು ಸಂಘದಲ್ಲಿ ಅಂತಿಮ ಅಧಿಕಾರವು ಸರ್ವ ಸದಸ್ಯರದ್ದಾಗಿರುತ್ತದೆ. ಕಾಯ್ದೆಯಲ್ಲಿ ತಿಳಿಸಿದಂತೆ ಸದಸ್ಯರ ಮಹಾಸಭೆಯನ್ನು ಜರಗಿಸುವ ಪ್ರಕ್ರಿಯೆಗಳು ಈ ರೀತಿ ಇರುತ್ತದೆ.

ಸರ್ವ ಸದಸ್ಯರ ಸಭೆ (ಮಹಾಸಭೆ)ಯನ್ನು ವರ್ಷಾಂತ್ಯವಾಗಿ (ಮಾರ್ಚ್ 31) ಆರು ತಿಂಗಳೊಳಗೆ (ಸೆಪ್ಟೆಂಬರ್ 25ರೊಳಗೆ) ಕಡ್ಡಾಯವಾಗಿ ಜರಗಿಸತಕ್ಕದ್ದು.
ವರ್ಷಾಂತ್ಯದ ಬಳಿಕ ಮೇ ಅಂತ್ಯದೊಳಗೆ ಸಂಘದ ವಾರ್ಷಿಕ ಲೆಕ್ಕಪತ್ರಗಳನ್ನು ಅಂತಿಮಗೊಳಿಸಿ ನಿರ್ಣಯಪಡಿಸಿದ ಲೆಕ್ಕ ಪರಿಶೋಧಕರಿಗೆ ಪರಿಶೋಧನೆಗಾಗಿ ಒಪ್ಪಿಸತಕ್ಕದ್ದು, ಲೆಕ್ಕ ಪರಿಶೋಧಕರು ಪರಿಶೋಧನೆ ನಡೆಸಿ ತಮ್ಮ ಅಂತಿಮ ವರದಿಯನ್ನು ಅಗೋಸ್ತು ಅಂತ್ಯದೊಳಗೆ ಸಂಘಕ್ಕೆ ಸಲ್ಲಿಸತಕ್ಕದ್ದು, ಪರಿಶೋಧಿತ ಲೆಕ್ಕ ಪತ್ರಗಳು ಕೂಡಾ ವಾರ್ಷಿಕ
ಮಹಾಸಭೆಯ ಕಾರ್ಯಸೂಚಿಯ ಭಾಗವಾಗಿರುತ್ತದೆ. ಆಡಳಿತ ಮಂಡಳಿಯು ವಾರ್ಷಿಕ ಮಹಾಸಭೆ ಜರುಗಿಸಲು ಅವಕಾಶವಿರುವ ಅಂತಿಮ ದಿನಾಂಕಕ್ಕೆ 3 ತಿಂಗಳ ಮುಂಚಿತವಾಗಿ ಮಹಾಸಭೆ ಜರುಗಿಸುವ ದಿನಾಂಕವನ್ನು ನಿರ್ಣಯಿಸಬೇಕು. ವಾರ್ಷಿಕ ಮಹಾಸಭೆಯಲ್ಲಿ ಕಾಯ್ದೆ ಕಲಂ 27ರಲ್ಲಿ ಹೇಳಿದ ಕಾರ್ಯಸೂಚಿಗಳನ್ನು ಚರ್ಚಿಸಿ, ವಿಮರ್ಶಿಸಿ ನಿರ್ಣಯ ಕೈಗೊಳ್ಳುವುದು.

ಒಂದು ಸಹಕಾರಿ ಸಂಘದಲ್ಲಿ ವಾರ್ಷಿಕ ಮಹಾಸಭೆಯು ಮಹತ್ವಪೂರ್ಣ ಅಂತಿಮ ಅಧಿಕಾರ ಹೊಂದಿರುವ ಸಭೆಯಾಗಿರುವುದರಿಂದ ಸದಸ್ಯರು ಇದರಲ್ಲಿ ಸಕ್ರೀಯವಾಗಿ ಭಾಗವಹಿಸಿ ಸಂಘದ ವ್ಯವಹಾರದ ಆಗು ಹೋಗುಗಳನ್ನು ಮನನ ಮಾಡಿಕೊಳ್ಳುವ ಅನಿವಾರ್ಯತೆ ಸಂಘದ ಆರೋಗ್ಯಕರ ಬೆಳವಣಿಗೆ ದೃಷ್ಟಿಯಿಂದ ತೀರಾ ಅಗತ್ಯವಿದೆ. ಸಾಮಾನ್ಯವಾಗಿ
ಸೆಪ್ಟೆಂಬರ ತಿಂಗಳು ಸಹಕಾರಿ ಸಂಘಗಳ ಮಹಾಸಭೆಯ ದಿನಗಳು, ಸಾಮಾನ್ಯ ಸದಸ್ಯರು ಸಂಘದಿಂದ ದೊರೆಯುವ ಸಾಲ ಸೌಲಭ್ಯಗಳ ಕಡೆ ಮಾತ್ರ ಗಮನ ಹರಿಸುತ್ತಾರೆ ಹೊರತು ಮಹಾಸಭೆಯ ಮಹತ್ವ ಅದರಲ್ಲಿ ಚರ್ಚಿಸುವ, ಪಾಲ್ಗೊಳ್ಳುವ ಅಗತ್ಯತೆಯ ಅರಿವು ಹೊಂದಿರುವುದಿಲ್ಲ.

(…. ಮುಂದುವರಿಯುತ್ತದೆ…)

ಭಾಗ-1 : https://theruralmirror.com/?p=15514

ಬರಹ :

ರಾಧಾಕೃಷ್ಣ ಕೋಟೆ, ಹಿರಿಯ ಸಹಕಾರಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

3 hours ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

3 hours ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

1 day ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

1 day ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

1 day ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

1 day ago