Advertisement
ಸುದ್ದಿಗಳು

ಸಹಕಾರ ಸಂಘಗಳ ನಿರ್ದೇಶಕರಿಗೆ ಮತ್ತು ಕಾರ್ಯ ನಿರ್ವಹಣಾಧಿಕಾರಿಗಳಿಗೆ ಶೈಕ್ಷಣಿಕ ಕಾರ್ಯಾಗಾರ

Share

ಸುಳ್ಯ: ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾ ಮಂಡಳ ಬೆಂಗಳೂರು ಹಾಗೂ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಸಹಯೋಗದಲ್ಲಿ ಮೈಸೂರು ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ ಸುಳ್ಯ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸಹಕಾರ ಸಂಘಗಳ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಕಾಶ್ ರಾವ್ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಅಧ್ಯಕ್ಷೆ ಕೆ.ಲಲಿತ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಉಪಾಧ್ಯಕ್ಷ ಡಾ.ಬಿ.ಡಿ.ಭೂಕಾಂತ, ನಿರ್ದೇಶಕ ಚಿತ್ತರಂಜನ್ ಬೋಳಾರ್, ಮಾಜಿ ಅಧ್ಯಕ್ಷ ಡಾ.ಶೇಖರ ವಿ.ಮಾಲಿ ಪಾಟೀಲ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕೆ.ಎಸ್.ದೇವರಾಜ್, ದ.ಕ.ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ನಾಯಕ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿದ್ದರು.

ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ, ಉಪಾಧ್ಯಕ್ಷ ಪಿ.ಎಸ್‌.ಗಂಗಾಧರ, ನಿರ್ದೇಶಕರಾದ ಪಿ.ಸಿ.ಜಯರಾಮ, ನಿತ್ಯಾನಂದ ಮುಂಡೋಡಿ, ಚಂದ್ರಾ ಕೋಲ್ಚಾರ್ ಉಪಸ್ಥಿತರಿದ್ದರು. ಮಹಾಮಂಡಳದ ಸಲಹೆಗಾರ ಕೆ.ಎಸ್‌.ಗುರುಪ್ರಸಾದ್ ಸ್ವಾಗತಿಸಿರು. ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ‌.ಟಿ.ವಿಶ್ವನಾಥ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 hour ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

6 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

23 hours ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago