Advertisement
ಸುದ್ದಿಗಳು

ಸಹಕಾರ ಸಂಘಗಳ ನಿರ್ದೇಶಕರಿಗೆ ಮತ್ತು ಕಾರ್ಯ ನಿರ್ವಹಣಾಧಿಕಾರಿಗಳಿಗೆ ಶೈಕ್ಷಣಿಕ ಕಾರ್ಯಾಗಾರ

Share

ಸುಳ್ಯ: ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾ ಮಂಡಳ ಬೆಂಗಳೂರು ಹಾಗೂ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಸಹಯೋಗದಲ್ಲಿ ಮೈಸೂರು ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ ಸುಳ್ಯ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸಹಕಾರ ಸಂಘಗಳ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಕಾಶ್ ರಾವ್ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಅಧ್ಯಕ್ಷೆ ಕೆ.ಲಲಿತ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಉಪಾಧ್ಯಕ್ಷ ಡಾ.ಬಿ.ಡಿ.ಭೂಕಾಂತ, ನಿರ್ದೇಶಕ ಚಿತ್ತರಂಜನ್ ಬೋಳಾರ್, ಮಾಜಿ ಅಧ್ಯಕ್ಷ ಡಾ.ಶೇಖರ ವಿ.ಮಾಲಿ ಪಾಟೀಲ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕೆ.ಎಸ್.ದೇವರಾಜ್, ದ.ಕ.ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ನಾಯಕ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿದ್ದರು.

ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ, ಉಪಾಧ್ಯಕ್ಷ ಪಿ.ಎಸ್‌.ಗಂಗಾಧರ, ನಿರ್ದೇಶಕರಾದ ಪಿ.ಸಿ.ಜಯರಾಮ, ನಿತ್ಯಾನಂದ ಮುಂಡೋಡಿ, ಚಂದ್ರಾ ಕೋಲ್ಚಾರ್ ಉಪಸ್ಥಿತರಿದ್ದರು. ಮಹಾಮಂಡಳದ ಸಲಹೆಗಾರ ಕೆ.ಎಸ್‌.ಗುರುಪ್ರಸಾದ್ ಸ್ವಾಗತಿಸಿರು. ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ‌.ಟಿ.ವಿಶ್ವನಾಥ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago