Political mirror

ಸಹಕಾರ ಸಂಘದ ಚುನಾವಣೆ- ಬಂಡಾಯ ಅಭ್ಯರ್ಥಿಗಳಿಗೆ ಬಿಜೆಪಿ ಎಚ್ಚರಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸುಳ್ಯ ತಾಲೂಕಿನಲ್ಲಿ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯ ಅಭ್ಯರ್ಥಿಗಳು ದೊಡ್ಡ ತಲೆ ನೋವು ಸೃಷ್ಟಿಸಿದೆ. ಅರಂತೋಡು ಸಹಕಾರಿ ಸಂಘದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಮತ್ತು ಐವರ್ನಾಡು ಸಹಕಾರಿ ಸಂಘದ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಹಾಗು ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ ಪಕ್ಷದ ಸೂಚನೆಯನ್ನು ಮೀರಿ ಸ್ಪರ್ಧೆಗೆ ಇಳಿದಿರುವುದು ಪಕ್ಷಕ್ಕೆ ತಲೆ ನೋವು ಸೃಷ್ಟಿಸಿದೆ. ಈ ಹಿನ್ನಲೆಯಲ್ಲಿ ಇವರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆಯನ್ನು ಪಕ್ಷ ನೀಡಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದೆ.

Advertisement

ಸುಳ್ಯ ಕ್ಷೇತ್ರದಲ್ಲಿ ಸಹಕಾರಿ ಸಂಘಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಸಹಕಾರ ಭಾರತಿಯ ಸೂಕ್ತ ಅಭ್ಯರ್ಥಿಗಳನ್ನು ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿದೆ. ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿರುವ ಎಸ್ ಎನ್ ಮನ್ಮಥ ಹಾಗೂ ಅರಂತೋಡು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿರುವ ಸಂತೋಷ್ ಕುತ್ತಮೊಟ್ಟೆಯವರು ಭಾರತೀಯ ಜನತಾ ಪಾರ್ಟಿ ಮತ್ತು ಸಹಕಾರ ಭಾರತಿಯ ಸೂಚನೆಗಳನ್ನು ಧಿಕ್ಕರಿಸಿರುತ್ತಾರೆ. ಹಾಗೂ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುತ್ತಾರೆ. ಹಾಗಾಗಿ ಅವರ ಮೇಲೆ ಸೂಕ್ತ ಶಿಸ್ತುಕ್ರಮ ಕೈಗೊಳ್ಳಲಾಗುವುದು. ‘ಅವರು ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾಗಿರುವುದಿಲ್ಲ’ ಎಂದು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಡ್ಡಮತದಾನದ ಇಫೆಕ್ಟ್: ದ.ಕ.ಜಿಲ್ಲಾ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಇಫೆಕ್ಟ್ ಸಹಕಾರ ಸಂಘಗಳ ಚುನಾವಣೆಯಲ್ಲಿ ಬಿಜೆಪಿ ಮತ್ತು ಸಹಕಾರ ಭಾರತಿಯನ್ನು ಕಂಗೆಡಿಸಿದೆ. ಅಡ್ಡಮತದಾನ ಮಾಡಿದ ಏಳು ಮಂದಿಯನ್ನು ನಿಖರವಾಗಿ ಪತ್ತೆ ಹಚ್ಚಲು ಕಾರಣವಾಗದ ಕಾರಣ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಪ್ರತಿನಿಧಿಗಳಾಗಿದ್ದ ಎಲ್ಲಾ 17 ಮಂದಿಯೂ ರಾಜಿನಾಮೆ ನೀಡಬೇಕೆಂದು ಸೂಚನೆ ನೀಡಲಾಗಿತ್ತು. ಪಕ್ಷ ನಿಗದಿಪಡಿಸಿದ ಸಮಯದೊಳಗೆ ರಾಜಿನಾಮೆ ನೀಡಿಲ್ಲ ಮತ್ತು ಪಕ್ಷದ ಸೂಚನೆಯನ್ನು ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಸಂತೋಷ್ ಕುತ್ತಮೊಟ್ಟೆ ಮತ್ತು ಎಸ್.ಎನ್.ಮನ್ಮಥರಿಗೆ ಚುನಾವಣೆಯಲ್ಲಿ ಅಭ್ಯರ್ಥಿಗಳಾಗಲು ಅವಕಾಶ ನೀಡಲಿಲ್ಲ. ಆದರೆ ಮಾತುಕತೆಗಳು ವಿಫಲವಾದ ಹಿನ್ನಲೆಯಲ್ಲಿ ಈ ಇಬ್ಬರು ಪಕ್ಚದ ಅಭ್ಯರ್ಥಿಗಳು ಅಲ್ಲ ಘೋಷಿಸಿ ಮತ್ತು ಇವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ

ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…

12 hours ago

ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?

ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ  ಬಗ್ಗೆ ಪುತ್ತೂರಿನ…

13 hours ago

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಬದುಕು ಪುರಾಣ | ಮೂಡದಿರಲಿ, ಮಂಥರೆ ಮನಸ್ಸು

ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…

1 day ago

ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ

ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…

2 days ago