Advertisement
Political mirror

ಸಹಕಾರ ಸಂಘದ ಚುನಾವಣೆ- ಬಂಡಾಯ ಅಭ್ಯರ್ಥಿಗಳಿಗೆ ಬಿಜೆಪಿ ಎಚ್ಚರಿಕೆ

Share

ಸುಳ್ಯ: ಸುಳ್ಯ ತಾಲೂಕಿನಲ್ಲಿ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯ ಅಭ್ಯರ್ಥಿಗಳು ದೊಡ್ಡ ತಲೆ ನೋವು ಸೃಷ್ಟಿಸಿದೆ. ಅರಂತೋಡು ಸಹಕಾರಿ ಸಂಘದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಮತ್ತು ಐವರ್ನಾಡು ಸಹಕಾರಿ ಸಂಘದ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಹಾಗು ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ ಪಕ್ಷದ ಸೂಚನೆಯನ್ನು ಮೀರಿ ಸ್ಪರ್ಧೆಗೆ ಇಳಿದಿರುವುದು ಪಕ್ಷಕ್ಕೆ ತಲೆ ನೋವು ಸೃಷ್ಟಿಸಿದೆ. ಈ ಹಿನ್ನಲೆಯಲ್ಲಿ ಇವರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆಯನ್ನು ಪಕ್ಷ ನೀಡಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದೆ.

Advertisement
Advertisement

ಸುಳ್ಯ ಕ್ಷೇತ್ರದಲ್ಲಿ ಸಹಕಾರಿ ಸಂಘಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಸಹಕಾರ ಭಾರತಿಯ ಸೂಕ್ತ ಅಭ್ಯರ್ಥಿಗಳನ್ನು ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿದೆ. ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿರುವ ಎಸ್ ಎನ್ ಮನ್ಮಥ ಹಾಗೂ ಅರಂತೋಡು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿರುವ ಸಂತೋಷ್ ಕುತ್ತಮೊಟ್ಟೆಯವರು ಭಾರತೀಯ ಜನತಾ ಪಾರ್ಟಿ ಮತ್ತು ಸಹಕಾರ ಭಾರತಿಯ ಸೂಚನೆಗಳನ್ನು ಧಿಕ್ಕರಿಸಿರುತ್ತಾರೆ. ಹಾಗೂ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುತ್ತಾರೆ. ಹಾಗಾಗಿ ಅವರ ಮೇಲೆ ಸೂಕ್ತ ಶಿಸ್ತುಕ್ರಮ ಕೈಗೊಳ್ಳಲಾಗುವುದು. ‘ಅವರು ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾಗಿರುವುದಿಲ್ಲ’ ಎಂದು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಡ್ಡಮತದಾನದ ಇಫೆಕ್ಟ್: ದ.ಕ.ಜಿಲ್ಲಾ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಇಫೆಕ್ಟ್ ಸಹಕಾರ ಸಂಘಗಳ ಚುನಾವಣೆಯಲ್ಲಿ ಬಿಜೆಪಿ ಮತ್ತು ಸಹಕಾರ ಭಾರತಿಯನ್ನು ಕಂಗೆಡಿಸಿದೆ. ಅಡ್ಡಮತದಾನ ಮಾಡಿದ ಏಳು ಮಂದಿಯನ್ನು ನಿಖರವಾಗಿ ಪತ್ತೆ ಹಚ್ಚಲು ಕಾರಣವಾಗದ ಕಾರಣ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಪ್ರತಿನಿಧಿಗಳಾಗಿದ್ದ ಎಲ್ಲಾ 17 ಮಂದಿಯೂ ರಾಜಿನಾಮೆ ನೀಡಬೇಕೆಂದು ಸೂಚನೆ ನೀಡಲಾಗಿತ್ತು. ಪಕ್ಷ ನಿಗದಿಪಡಿಸಿದ ಸಮಯದೊಳಗೆ ರಾಜಿನಾಮೆ ನೀಡಿಲ್ಲ ಮತ್ತು ಪಕ್ಷದ ಸೂಚನೆಯನ್ನು ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಸಂತೋಷ್ ಕುತ್ತಮೊಟ್ಟೆ ಮತ್ತು ಎಸ್.ಎನ್.ಮನ್ಮಥರಿಗೆ ಚುನಾವಣೆಯಲ್ಲಿ ಅಭ್ಯರ್ಥಿಗಳಾಗಲು ಅವಕಾಶ ನೀಡಲಿಲ್ಲ. ಆದರೆ ಮಾತುಕತೆಗಳು ವಿಫಲವಾದ ಹಿನ್ನಲೆಯಲ್ಲಿ ಈ ಇಬ್ಬರು ಪಕ್ಚದ ಅಭ್ಯರ್ಥಿಗಳು ಅಲ್ಲ ಘೋಷಿಸಿ ಮತ್ತು ಇವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

4 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

4 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

4 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

5 hours ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

5 hours ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

15 hours ago