Advertisement
Political mirror

ಸಹಕಾರ ಸಂಘದ ಚುನಾವಣೆ- ಬಂಡಾಯ ಅಭ್ಯರ್ಥಿಗಳಿಗೆ ಬಿಜೆಪಿ ಎಚ್ಚರಿಕೆ

Share

ಸುಳ್ಯ: ಸುಳ್ಯ ತಾಲೂಕಿನಲ್ಲಿ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯ ಅಭ್ಯರ್ಥಿಗಳು ದೊಡ್ಡ ತಲೆ ನೋವು ಸೃಷ್ಟಿಸಿದೆ. ಅರಂತೋಡು ಸಹಕಾರಿ ಸಂಘದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಮತ್ತು ಐವರ್ನಾಡು ಸಹಕಾರಿ ಸಂಘದ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಹಾಗು ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ ಪಕ್ಷದ ಸೂಚನೆಯನ್ನು ಮೀರಿ ಸ್ಪರ್ಧೆಗೆ ಇಳಿದಿರುವುದು ಪಕ್ಷಕ್ಕೆ ತಲೆ ನೋವು ಸೃಷ್ಟಿಸಿದೆ. ಈ ಹಿನ್ನಲೆಯಲ್ಲಿ ಇವರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆಯನ್ನು ಪಕ್ಷ ನೀಡಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದೆ.

ಸುಳ್ಯ ಕ್ಷೇತ್ರದಲ್ಲಿ ಸಹಕಾರಿ ಸಂಘಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಸಹಕಾರ ಭಾರತಿಯ ಸೂಕ್ತ ಅಭ್ಯರ್ಥಿಗಳನ್ನು ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿದೆ. ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿರುವ ಎಸ್ ಎನ್ ಮನ್ಮಥ ಹಾಗೂ ಅರಂತೋಡು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿರುವ ಸಂತೋಷ್ ಕುತ್ತಮೊಟ್ಟೆಯವರು ಭಾರತೀಯ ಜನತಾ ಪಾರ್ಟಿ ಮತ್ತು ಸಹಕಾರ ಭಾರತಿಯ ಸೂಚನೆಗಳನ್ನು ಧಿಕ್ಕರಿಸಿರುತ್ತಾರೆ. ಹಾಗೂ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುತ್ತಾರೆ. ಹಾಗಾಗಿ ಅವರ ಮೇಲೆ ಸೂಕ್ತ ಶಿಸ್ತುಕ್ರಮ ಕೈಗೊಳ್ಳಲಾಗುವುದು. ‘ಅವರು ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾಗಿರುವುದಿಲ್ಲ’ ಎಂದು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಡ್ಡಮತದಾನದ ಇಫೆಕ್ಟ್: ದ.ಕ.ಜಿಲ್ಲಾ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಇಫೆಕ್ಟ್ ಸಹಕಾರ ಸಂಘಗಳ ಚುನಾವಣೆಯಲ್ಲಿ ಬಿಜೆಪಿ ಮತ್ತು ಸಹಕಾರ ಭಾರತಿಯನ್ನು ಕಂಗೆಡಿಸಿದೆ. ಅಡ್ಡಮತದಾನ ಮಾಡಿದ ಏಳು ಮಂದಿಯನ್ನು ನಿಖರವಾಗಿ ಪತ್ತೆ ಹಚ್ಚಲು ಕಾರಣವಾಗದ ಕಾರಣ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಪ್ರತಿನಿಧಿಗಳಾಗಿದ್ದ ಎಲ್ಲಾ 17 ಮಂದಿಯೂ ರಾಜಿನಾಮೆ ನೀಡಬೇಕೆಂದು ಸೂಚನೆ ನೀಡಲಾಗಿತ್ತು. ಪಕ್ಷ ನಿಗದಿಪಡಿಸಿದ ಸಮಯದೊಳಗೆ ರಾಜಿನಾಮೆ ನೀಡಿಲ್ಲ ಮತ್ತು ಪಕ್ಷದ ಸೂಚನೆಯನ್ನು ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಸಂತೋಷ್ ಕುತ್ತಮೊಟ್ಟೆ ಮತ್ತು ಎಸ್.ಎನ್.ಮನ್ಮಥರಿಗೆ ಚುನಾವಣೆಯಲ್ಲಿ ಅಭ್ಯರ್ಥಿಗಳಾಗಲು ಅವಕಾಶ ನೀಡಲಿಲ್ಲ. ಆದರೆ ಮಾತುಕತೆಗಳು ವಿಫಲವಾದ ಹಿನ್ನಲೆಯಲ್ಲಿ ಈ ಇಬ್ಬರು ಪಕ್ಚದ ಅಭ್ಯರ್ಥಿಗಳು ಅಲ್ಲ ಘೋಷಿಸಿ ಮತ್ತು ಇವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 hour ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

2 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

11 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

13 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

20 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

1 day ago