ಸುದ್ದಿಗಳು

ಸಹಾಯವಾದ ಟ್ರಕ್ಕಿಂಗ್ ಟ್ರಿಕ್ಸ್ : ಯುವಕ ಸುರಕ್ಷಿತವಾಗಿ ಸುಬ್ರಹ್ಮಣ್ಯ ಸೇರಿದ…!

Share

ಸುಬ್ರಹ್ಮಣ್ಯ: ಕುಮಾರಪರ್ವತ ಚಾರಣಕ್ಕೆ ಹೋದ 12 ಜನ  ಯುವಕರ ತಂಡದಲ್ಲಿದ್ದ ಬೆಂಗಳೂರಿನ ಖಾಸಗಿ ಉದ್ಯೋಗಿ ಬೆಂಗಳೂರು ಗಾಯತ್ರಿ ನಗರದ ನಿವಾಸಿ 25 ವರ್ಷದ ಯುವಕ ಸಂತೋಷ್ ಸುರಕ್ಷಿತವಾಗಿ ಸುಬ್ರಹ್ಮಣ್ಯ ತಲಪಿದ್ದಾರೆ. ಹೀಗಾಗಿ ಎರಡು ದಿನ ಸ್ಥಳೀಯರಿಗೂ , ಇಲಾಖೆಗಳಿಗೂ ಸಂತೋಷ್ ಕುಟುಂಬದ ಆತಂಕ ದೂರ ಮಾಡಿದ್ದ.

Advertisement

ಜೊತೆಯಾಗಿಯೇ ಎಲ್ಲರೂ ಬರುತ್ತಿದ್ದಾಗ ಮಳೆ ಹಿನ್ನೆಲೆಯಲ್ಲಿ ಜಾಕೆಟ್ ಬದಲಿಸುವ ವೇಳೆ ಸ್ವಲ್ಪ ಹಿಂದೆ ಉಳಿದ ಸಂತೋಷ್ ದಾರಿ ತಪ್ಪಿದ್ದರು. ಹೀಗಾಗಿ ಎರಡು ದಿನಗಳ ಬಳಿಕ ಸುಬ್ರಹ್ಮಣ್ಯ ಸೇರಿದರು. ಟ್ರಕ್ಕಿಂಗ್ ಟ್ರಿಕ್ಸ್ ಅರಿತಿರುವ ಎಲ್ಲರೂ ಕೂಡಾ ಪ್ರಾಣಿಗಳ ಭಯ ಇಲ್ಲದೇ ಇದ್ದರೆ ಹಾಗೂ ಊರಿನ ಹತ್ತಿರ ಇದ್ದರೆ ಸುರಕ್ಷಿತವಾಗಿ ಸೇರಲು ಸಾಧ್ಯವಿದೆ. ಇಲ್ಲೂ ಯುವಕ ಸಂತೋಷ್ ಅದೇ ದಾರಿಯಲ್ಲಿ ಸುರಕ್ಷಿತವಾಗಿ ಸೇರಿದ್ದಾರೆ. ಕಾಡಿನೊಳಗೆ ದಾರಿ ತಪ್ಪಿದರೆ ಮೊದಲು ನೀರಿನ ಮೂಲ ನೋಡಿದ ಬಳಿಕ ಹೊಳೆ ಹರಿದಂತೆ ಸಾಗಿದರೆ ಯಾವುದಾದರೊಂದು ಊರು ಸೇರುವುದು  ನಿಶ್ಚಿತ. ಇಲ್ಲೂ ಯುವಕ ಸಂತೋಷ್ ದಾರಿ ತಪ್ಪಿದ ಬಳಿಕ ನೀರನ್ನು ಹುಡುಕಿದಾಗ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ನೀರಿನ ಪೈಪ್ ಲಭ್ಯವಾದ ಬಳಿಕ ಅದೇ ದಾರಿಯಲ್ಲಿ  ಬಂದು ಕುಕ್ಕೆ ಸುಬ್ರಹ್ಮಣ್ಯ ತಲಪಿದ್ದಾನೆ. ಹೀಗಾಗಿ ಆತಂಕ ದೂರವಾಗಿದೆ.

ಗಿರಿಗದ್ದೆಯಿಂದ ಸುಬ್ರಹ್ಮಣ್ಯದವರೆಗೆ ಇದುವರೆಗೆ ಯಾವುದೇ ಪ್ರಾಣಿಗಳ ಭಯ ಇದ್ದಿರಲಿಲ್ಲ. ಆನೆಗಳು ಓಡಾಟ ನಡೆಸಿದರೂ ಜೀವಕ್ಕೆ ಅಪಾಯ ಮಾಡಿದ ಘಟನೆ ನಡೆದಿರಲಿಲ್ಲ. ಪ್ರತಿದಿನವೂ ಗಿರಿಗದ್ದೆಯಿಂದ ಸುಬ್ರಹ್ಮಣ್ಯದವರೆಗೆ ಜನರ ಸಂಚಾರ ಇರುತ್ತದೆ. ಹೀಗಾಗಿ ಯುವಕ ದಾರಿ ತಪ್ಪಿ ಹೋಗಿರಬೇಕು ಎಂದು ಸ್ಥಳೀಯರು ಅಂದಾಜಿಸಿದ್ದರು. ಅದು ನಿಜವಾಯ್ತು.

ಕಾರ್ಯಾಚರಣೆಯಲ್ಲಿ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಕೈಜೋಡಿಸಿದ್ದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶ್ರಾವಣ ಮಾಸದಲ್ಲಿ ಮೊಸರನ್ನು ತಿನ್ನಬಾರದಂತೆ ಯಾಕೆ?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

40 minutes ago

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ

ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…

10 hours ago

ಪ್ರತಿಯೊಂದು  ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…

11 hours ago

ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಷೇಧ

ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…

11 hours ago

ಹೃದಯಾಘಾತದ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯ ಇಲ್ಲ

ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರಿಂದ ಜನರಲ್ಲಿ ಹೃದಯದ ವಿಷಯದಲ್ಲಿ ಭಯದ ವಾತಾವರಣ…

11 hours ago

ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ – ಗೃಹಸಚಿವ ಡಾ.ಜಿ.ಪರಮೇಶ್ವರ್

ಸುಳ್ಳು ಸುದ್ದಿ ಹರಡುವವರು ಮತ್ತು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ದ ಸೂಕ್ತ ಕಾನೂನು…

11 hours ago