ಸುಬ್ರಹ್ಮಣ್ಯ: ಕುಮಾರಪರ್ವತ ಚಾರಣಕ್ಕೆ ಹೋದ 12 ಜನ ಯುವಕರ ತಂಡದಲ್ಲಿದ್ದ ಬೆಂಗಳೂರಿನ ಖಾಸಗಿ ಉದ್ಯೋಗಿ ಬೆಂಗಳೂರು ಗಾಯತ್ರಿ ನಗರದ ನಿವಾಸಿ 25 ವರ್ಷದ ಯುವಕ ಸಂತೋಷ್ ಸುರಕ್ಷಿತವಾಗಿ ಸುಬ್ರಹ್ಮಣ್ಯ ತಲಪಿದ್ದಾರೆ. ಹೀಗಾಗಿ ಎರಡು ದಿನ ಸ್ಥಳೀಯರಿಗೂ , ಇಲಾಖೆಗಳಿಗೂ ಸಂತೋಷ್ ಕುಟುಂಬದ ಆತಂಕ ದೂರ ಮಾಡಿದ್ದ.
ಜೊತೆಯಾಗಿಯೇ ಎಲ್ಲರೂ ಬರುತ್ತಿದ್ದಾಗ ಮಳೆ ಹಿನ್ನೆಲೆಯಲ್ಲಿ ಜಾಕೆಟ್ ಬದಲಿಸುವ ವೇಳೆ ಸ್ವಲ್ಪ ಹಿಂದೆ ಉಳಿದ ಸಂತೋಷ್ ದಾರಿ ತಪ್ಪಿದ್ದರು. ಹೀಗಾಗಿ ಎರಡು ದಿನಗಳ ಬಳಿಕ ಸುಬ್ರಹ್ಮಣ್ಯ ಸೇರಿದರು. ಟ್ರಕ್ಕಿಂಗ್ ಟ್ರಿಕ್ಸ್ ಅರಿತಿರುವ ಎಲ್ಲರೂ ಕೂಡಾ ಪ್ರಾಣಿಗಳ ಭಯ ಇಲ್ಲದೇ ಇದ್ದರೆ ಹಾಗೂ ಊರಿನ ಹತ್ತಿರ ಇದ್ದರೆ ಸುರಕ್ಷಿತವಾಗಿ ಸೇರಲು ಸಾಧ್ಯವಿದೆ. ಇಲ್ಲೂ ಯುವಕ ಸಂತೋಷ್ ಅದೇ ದಾರಿಯಲ್ಲಿ ಸುರಕ್ಷಿತವಾಗಿ ಸೇರಿದ್ದಾರೆ. ಕಾಡಿನೊಳಗೆ ದಾರಿ ತಪ್ಪಿದರೆ ಮೊದಲು ನೀರಿನ ಮೂಲ ನೋಡಿದ ಬಳಿಕ ಹೊಳೆ ಹರಿದಂತೆ ಸಾಗಿದರೆ ಯಾವುದಾದರೊಂದು ಊರು ಸೇರುವುದು ನಿಶ್ಚಿತ. ಇಲ್ಲೂ ಯುವಕ ಸಂತೋಷ್ ದಾರಿ ತಪ್ಪಿದ ಬಳಿಕ ನೀರನ್ನು ಹುಡುಕಿದಾಗ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ನೀರಿನ ಪೈಪ್ ಲಭ್ಯವಾದ ಬಳಿಕ ಅದೇ ದಾರಿಯಲ್ಲಿ ಬಂದು ಕುಕ್ಕೆ ಸುಬ್ರಹ್ಮಣ್ಯ ತಲಪಿದ್ದಾನೆ. ಹೀಗಾಗಿ ಆತಂಕ ದೂರವಾಗಿದೆ.
ಗಿರಿಗದ್ದೆಯಿಂದ ಸುಬ್ರಹ್ಮಣ್ಯದವರೆಗೆ ಇದುವರೆಗೆ ಯಾವುದೇ ಪ್ರಾಣಿಗಳ ಭಯ ಇದ್ದಿರಲಿಲ್ಲ. ಆನೆಗಳು ಓಡಾಟ ನಡೆಸಿದರೂ ಜೀವಕ್ಕೆ ಅಪಾಯ ಮಾಡಿದ ಘಟನೆ ನಡೆದಿರಲಿಲ್ಲ. ಪ್ರತಿದಿನವೂ ಗಿರಿಗದ್ದೆಯಿಂದ ಸುಬ್ರಹ್ಮಣ್ಯದವರೆಗೆ ಜನರ ಸಂಚಾರ ಇರುತ್ತದೆ. ಹೀಗಾಗಿ ಯುವಕ ದಾರಿ ತಪ್ಪಿ ಹೋಗಿರಬೇಕು ಎಂದು ಸ್ಥಳೀಯರು ಅಂದಾಜಿಸಿದ್ದರು. ಅದು ನಿಜವಾಯ್ತು.
ಕಾರ್ಯಾಚರಣೆಯಲ್ಲಿ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಕೈಜೋಡಿಸಿದ್ದರು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…