ಸುಬ್ರಹ್ಮಣ್ಯ: ಕುಮಾರಪರ್ವತ ಚಾರಣಕ್ಕೆ ಹೋದ 12 ಜನ ಯುವಕರ ತಂಡದಲ್ಲಿದ್ದ ಬೆಂಗಳೂರಿನ ಖಾಸಗಿ ಉದ್ಯೋಗಿ ಬೆಂಗಳೂರು ಗಾಯತ್ರಿ ನಗರದ ನಿವಾಸಿ 25 ವರ್ಷದ ಯುವಕ ಸಂತೋಷ್ ಸುರಕ್ಷಿತವಾಗಿ ಸುಬ್ರಹ್ಮಣ್ಯ ತಲಪಿದ್ದಾರೆ. ಹೀಗಾಗಿ ಎರಡು ದಿನ ಸ್ಥಳೀಯರಿಗೂ , ಇಲಾಖೆಗಳಿಗೂ ಸಂತೋಷ್ ಕುಟುಂಬದ ಆತಂಕ ದೂರ ಮಾಡಿದ್ದ.
ಜೊತೆಯಾಗಿಯೇ ಎಲ್ಲರೂ ಬರುತ್ತಿದ್ದಾಗ ಮಳೆ ಹಿನ್ನೆಲೆಯಲ್ಲಿ ಜಾಕೆಟ್ ಬದಲಿಸುವ ವೇಳೆ ಸ್ವಲ್ಪ ಹಿಂದೆ ಉಳಿದ ಸಂತೋಷ್ ದಾರಿ ತಪ್ಪಿದ್ದರು. ಹೀಗಾಗಿ ಎರಡು ದಿನಗಳ ಬಳಿಕ ಸುಬ್ರಹ್ಮಣ್ಯ ಸೇರಿದರು. ಟ್ರಕ್ಕಿಂಗ್ ಟ್ರಿಕ್ಸ್ ಅರಿತಿರುವ ಎಲ್ಲರೂ ಕೂಡಾ ಪ್ರಾಣಿಗಳ ಭಯ ಇಲ್ಲದೇ ಇದ್ದರೆ ಹಾಗೂ ಊರಿನ ಹತ್ತಿರ ಇದ್ದರೆ ಸುರಕ್ಷಿತವಾಗಿ ಸೇರಲು ಸಾಧ್ಯವಿದೆ. ಇಲ್ಲೂ ಯುವಕ ಸಂತೋಷ್ ಅದೇ ದಾರಿಯಲ್ಲಿ ಸುರಕ್ಷಿತವಾಗಿ ಸೇರಿದ್ದಾರೆ. ಕಾಡಿನೊಳಗೆ ದಾರಿ ತಪ್ಪಿದರೆ ಮೊದಲು ನೀರಿನ ಮೂಲ ನೋಡಿದ ಬಳಿಕ ಹೊಳೆ ಹರಿದಂತೆ ಸಾಗಿದರೆ ಯಾವುದಾದರೊಂದು ಊರು ಸೇರುವುದು ನಿಶ್ಚಿತ. ಇಲ್ಲೂ ಯುವಕ ಸಂತೋಷ್ ದಾರಿ ತಪ್ಪಿದ ಬಳಿಕ ನೀರನ್ನು ಹುಡುಕಿದಾಗ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ನೀರಿನ ಪೈಪ್ ಲಭ್ಯವಾದ ಬಳಿಕ ಅದೇ ದಾರಿಯಲ್ಲಿ ಬಂದು ಕುಕ್ಕೆ ಸುಬ್ರಹ್ಮಣ್ಯ ತಲಪಿದ್ದಾನೆ. ಹೀಗಾಗಿ ಆತಂಕ ದೂರವಾಗಿದೆ.
ಗಿರಿಗದ್ದೆಯಿಂದ ಸುಬ್ರಹ್ಮಣ್ಯದವರೆಗೆ ಇದುವರೆಗೆ ಯಾವುದೇ ಪ್ರಾಣಿಗಳ ಭಯ ಇದ್ದಿರಲಿಲ್ಲ. ಆನೆಗಳು ಓಡಾಟ ನಡೆಸಿದರೂ ಜೀವಕ್ಕೆ ಅಪಾಯ ಮಾಡಿದ ಘಟನೆ ನಡೆದಿರಲಿಲ್ಲ. ಪ್ರತಿದಿನವೂ ಗಿರಿಗದ್ದೆಯಿಂದ ಸುಬ್ರಹ್ಮಣ್ಯದವರೆಗೆ ಜನರ ಸಂಚಾರ ಇರುತ್ತದೆ. ಹೀಗಾಗಿ ಯುವಕ ದಾರಿ ತಪ್ಪಿ ಹೋಗಿರಬೇಕು ಎಂದು ಸ್ಥಳೀಯರು ಅಂದಾಜಿಸಿದ್ದರು. ಅದು ನಿಜವಾಯ್ತು.
ಕಾರ್ಯಾಚರಣೆಯಲ್ಲಿ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಕೈಜೋಡಿಸಿದ್ದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…