Advertisement
ಸುದ್ದಿಗಳು

ಸಹಾಯವಾದ ಟ್ರಕ್ಕಿಂಗ್ ಟ್ರಿಕ್ಸ್ : ಯುವಕ ಸುರಕ್ಷಿತವಾಗಿ ಸುಬ್ರಹ್ಮಣ್ಯ ಸೇರಿದ…!

Share

ಸುಬ್ರಹ್ಮಣ್ಯ: ಕುಮಾರಪರ್ವತ ಚಾರಣಕ್ಕೆ ಹೋದ 12 ಜನ  ಯುವಕರ ತಂಡದಲ್ಲಿದ್ದ ಬೆಂಗಳೂರಿನ ಖಾಸಗಿ ಉದ್ಯೋಗಿ ಬೆಂಗಳೂರು ಗಾಯತ್ರಿ ನಗರದ ನಿವಾಸಿ 25 ವರ್ಷದ ಯುವಕ ಸಂತೋಷ್ ಸುರಕ್ಷಿತವಾಗಿ ಸುಬ್ರಹ್ಮಣ್ಯ ತಲಪಿದ್ದಾರೆ. ಹೀಗಾಗಿ ಎರಡು ದಿನ ಸ್ಥಳೀಯರಿಗೂ , ಇಲಾಖೆಗಳಿಗೂ ಸಂತೋಷ್ ಕುಟುಂಬದ ಆತಂಕ ದೂರ ಮಾಡಿದ್ದ.

ಜೊತೆಯಾಗಿಯೇ ಎಲ್ಲರೂ ಬರುತ್ತಿದ್ದಾಗ ಮಳೆ ಹಿನ್ನೆಲೆಯಲ್ಲಿ ಜಾಕೆಟ್ ಬದಲಿಸುವ ವೇಳೆ ಸ್ವಲ್ಪ ಹಿಂದೆ ಉಳಿದ ಸಂತೋಷ್ ದಾರಿ ತಪ್ಪಿದ್ದರು. ಹೀಗಾಗಿ ಎರಡು ದಿನಗಳ ಬಳಿಕ ಸುಬ್ರಹ್ಮಣ್ಯ ಸೇರಿದರು. ಟ್ರಕ್ಕಿಂಗ್ ಟ್ರಿಕ್ಸ್ ಅರಿತಿರುವ ಎಲ್ಲರೂ ಕೂಡಾ ಪ್ರಾಣಿಗಳ ಭಯ ಇಲ್ಲದೇ ಇದ್ದರೆ ಹಾಗೂ ಊರಿನ ಹತ್ತಿರ ಇದ್ದರೆ ಸುರಕ್ಷಿತವಾಗಿ ಸೇರಲು ಸಾಧ್ಯವಿದೆ. ಇಲ್ಲೂ ಯುವಕ ಸಂತೋಷ್ ಅದೇ ದಾರಿಯಲ್ಲಿ ಸುರಕ್ಷಿತವಾಗಿ ಸೇರಿದ್ದಾರೆ. ಕಾಡಿನೊಳಗೆ ದಾರಿ ತಪ್ಪಿದರೆ ಮೊದಲು ನೀರಿನ ಮೂಲ ನೋಡಿದ ಬಳಿಕ ಹೊಳೆ ಹರಿದಂತೆ ಸಾಗಿದರೆ ಯಾವುದಾದರೊಂದು ಊರು ಸೇರುವುದು  ನಿಶ್ಚಿತ. ಇಲ್ಲೂ ಯುವಕ ಸಂತೋಷ್ ದಾರಿ ತಪ್ಪಿದ ಬಳಿಕ ನೀರನ್ನು ಹುಡುಕಿದಾಗ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ನೀರಿನ ಪೈಪ್ ಲಭ್ಯವಾದ ಬಳಿಕ ಅದೇ ದಾರಿಯಲ್ಲಿ  ಬಂದು ಕುಕ್ಕೆ ಸುಬ್ರಹ್ಮಣ್ಯ ತಲಪಿದ್ದಾನೆ. ಹೀಗಾಗಿ ಆತಂಕ ದೂರವಾಗಿದೆ.

ಗಿರಿಗದ್ದೆಯಿಂದ ಸುಬ್ರಹ್ಮಣ್ಯದವರೆಗೆ ಇದುವರೆಗೆ ಯಾವುದೇ ಪ್ರಾಣಿಗಳ ಭಯ ಇದ್ದಿರಲಿಲ್ಲ. ಆನೆಗಳು ಓಡಾಟ ನಡೆಸಿದರೂ ಜೀವಕ್ಕೆ ಅಪಾಯ ಮಾಡಿದ ಘಟನೆ ನಡೆದಿರಲಿಲ್ಲ. ಪ್ರತಿದಿನವೂ ಗಿರಿಗದ್ದೆಯಿಂದ ಸುಬ್ರಹ್ಮಣ್ಯದವರೆಗೆ ಜನರ ಸಂಚಾರ ಇರುತ್ತದೆ. ಹೀಗಾಗಿ ಯುವಕ ದಾರಿ ತಪ್ಪಿ ಹೋಗಿರಬೇಕು ಎಂದು ಸ್ಥಳೀಯರು ಅಂದಾಜಿಸಿದ್ದರು. ಅದು ನಿಜವಾಯ್ತು.

ಕಾರ್ಯಾಚರಣೆಯಲ್ಲಿ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಕೈಜೋಡಿಸಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಳುಮೆಣಸು ಬೆಳೆಗಾರರಿಗೆ ಸಿಹಿ ಸುದ್ದಿ – ಜೂನ್ ಅಂತ್ಯದೊಳಗೆ ಪೆಪ್ಪರ್ ಫ್ಯೂಚರ್ಸ್ ಮರುಪ್ರಾರಂಭಕ್ಕೆ NCDEX ಸಜ್ಜು

ಸುಮಾರು ಒಂದು ದಶಕದ ಬಳಿಕ NCDEX ಕಾಳುಮೆಣಸು ಫ್ಯೂಚರ್ಸ್ ವಹಿವಾಟನ್ನು ಜೂನ್ ಅಂತ್ಯದೊಳಗೆ…

1 hour ago

ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!

ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು…

1 hour ago

ರಬ್ಬರ್ ಕ್ಷೇತ್ರಕ್ಕೆ ಹೊಸ ಅವಕಾಶ – ಈಗ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ ರಾಜ್ಯ

ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…

13 hours ago

ನಕಲಿ ಹೆಲಿಕಾಪ್ಟರ್ ಬುಕ್ಕಿಂಗ್ ಜಾಲ ಭೇದಿಸಿದ ದೆಹಲಿ ಪೊಲೀಸರು, ಮೂವರು ಬಂಧನ

ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…

13 hours ago

ಮಳೆಗಾಲದ ಎಚ್ಚರಿಕೆ: ರಸ್ತೆ ಡಿವೈಡರ್‌ಗಳ ಮೇಲಿನ ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…

13 hours ago

ಕೇರಳದಲ್ಲಿ ಜೂನ್ 12-13 ರಂದು ಭಾರೀ ಮಳೆ ಎಚ್ಚರಿಕೆ – ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ 30-40…

15 hours ago