Advertisement
ಸುದ್ದಿಗಳು

ಸಹಾಯವಾದ ಟ್ರಕ್ಕಿಂಗ್ ಟ್ರಿಕ್ಸ್ : ಯುವಕ ಸುರಕ್ಷಿತವಾಗಿ ಸುಬ್ರಹ್ಮಣ್ಯ ಸೇರಿದ…!

Share

ಸುಬ್ರಹ್ಮಣ್ಯ: ಕುಮಾರಪರ್ವತ ಚಾರಣಕ್ಕೆ ಹೋದ 12 ಜನ  ಯುವಕರ ತಂಡದಲ್ಲಿದ್ದ ಬೆಂಗಳೂರಿನ ಖಾಸಗಿ ಉದ್ಯೋಗಿ ಬೆಂಗಳೂರು ಗಾಯತ್ರಿ ನಗರದ ನಿವಾಸಿ 25 ವರ್ಷದ ಯುವಕ ಸಂತೋಷ್ ಸುರಕ್ಷಿತವಾಗಿ ಸುಬ್ರಹ್ಮಣ್ಯ ತಲಪಿದ್ದಾರೆ. ಹೀಗಾಗಿ ಎರಡು ದಿನ ಸ್ಥಳೀಯರಿಗೂ , ಇಲಾಖೆಗಳಿಗೂ ಸಂತೋಷ್ ಕುಟುಂಬದ ಆತಂಕ ದೂರ ಮಾಡಿದ್ದ.

ಜೊತೆಯಾಗಿಯೇ ಎಲ್ಲರೂ ಬರುತ್ತಿದ್ದಾಗ ಮಳೆ ಹಿನ್ನೆಲೆಯಲ್ಲಿ ಜಾಕೆಟ್ ಬದಲಿಸುವ ವೇಳೆ ಸ್ವಲ್ಪ ಹಿಂದೆ ಉಳಿದ ಸಂತೋಷ್ ದಾರಿ ತಪ್ಪಿದ್ದರು. ಹೀಗಾಗಿ ಎರಡು ದಿನಗಳ ಬಳಿಕ ಸುಬ್ರಹ್ಮಣ್ಯ ಸೇರಿದರು. ಟ್ರಕ್ಕಿಂಗ್ ಟ್ರಿಕ್ಸ್ ಅರಿತಿರುವ ಎಲ್ಲರೂ ಕೂಡಾ ಪ್ರಾಣಿಗಳ ಭಯ ಇಲ್ಲದೇ ಇದ್ದರೆ ಹಾಗೂ ಊರಿನ ಹತ್ತಿರ ಇದ್ದರೆ ಸುರಕ್ಷಿತವಾಗಿ ಸೇರಲು ಸಾಧ್ಯವಿದೆ. ಇಲ್ಲೂ ಯುವಕ ಸಂತೋಷ್ ಅದೇ ದಾರಿಯಲ್ಲಿ ಸುರಕ್ಷಿತವಾಗಿ ಸೇರಿದ್ದಾರೆ. ಕಾಡಿನೊಳಗೆ ದಾರಿ ತಪ್ಪಿದರೆ ಮೊದಲು ನೀರಿನ ಮೂಲ ನೋಡಿದ ಬಳಿಕ ಹೊಳೆ ಹರಿದಂತೆ ಸಾಗಿದರೆ ಯಾವುದಾದರೊಂದು ಊರು ಸೇರುವುದು  ನಿಶ್ಚಿತ. ಇಲ್ಲೂ ಯುವಕ ಸಂತೋಷ್ ದಾರಿ ತಪ್ಪಿದ ಬಳಿಕ ನೀರನ್ನು ಹುಡುಕಿದಾಗ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ನೀರಿನ ಪೈಪ್ ಲಭ್ಯವಾದ ಬಳಿಕ ಅದೇ ದಾರಿಯಲ್ಲಿ  ಬಂದು ಕುಕ್ಕೆ ಸುಬ್ರಹ್ಮಣ್ಯ ತಲಪಿದ್ದಾನೆ. ಹೀಗಾಗಿ ಆತಂಕ ದೂರವಾಗಿದೆ.

Advertisement

ಗಿರಿಗದ್ದೆಯಿಂದ ಸುಬ್ರಹ್ಮಣ್ಯದವರೆಗೆ ಇದುವರೆಗೆ ಯಾವುದೇ ಪ್ರಾಣಿಗಳ ಭಯ ಇದ್ದಿರಲಿಲ್ಲ. ಆನೆಗಳು ಓಡಾಟ ನಡೆಸಿದರೂ ಜೀವಕ್ಕೆ ಅಪಾಯ ಮಾಡಿದ ಘಟನೆ ನಡೆದಿರಲಿಲ್ಲ. ಪ್ರತಿದಿನವೂ ಗಿರಿಗದ್ದೆಯಿಂದ ಸುಬ್ರಹ್ಮಣ್ಯದವರೆಗೆ ಜನರ ಸಂಚಾರ ಇರುತ್ತದೆ. ಹೀಗಾಗಿ ಯುವಕ ದಾರಿ ತಪ್ಪಿ ಹೋಗಿರಬೇಕು ಎಂದು ಸ್ಥಳೀಯರು ಅಂದಾಜಿಸಿದ್ದರು. ಅದು ನಿಜವಾಯ್ತು.

Advertisement

ಕಾರ್ಯಾಚರಣೆಯಲ್ಲಿ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಕೈಜೋಡಿಸಿದ್ದರು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

40 minutes ago

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

17 hours ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

17 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…

21 hours ago

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…

1 day ago

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

1 day ago