ಸುಳ್ಯ: ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನೇತೃತ್ವದಲ್ಲಿ ದಾನಿಗಳ ನೆರವಿನಿಂದ ಮತ್ತು ಯುವ ಸಂಘಟನೆಗಳ ಕಾರ್ಯಕರ್ತರ ಶ್ರಮದಾನದಿಂದ ಅಜ್ಜಾವರದಲ್ಲಿ ನಿರ್ಮಾಣಗೊಂಡ ನೂತನ ಮನೆ ‘ಬೆಳಕು‘ ಹಸ್ತಾಂತರ ಕಾರ್ಯಕ್ರಮ ಶುಕ್ರವಾರ ನಡೆಯಿತು. ಗ್ರಾಮದ ಅಡ್ಪಾಂಗಾಯ ಮಾವಿನಪಳ್ಳದಲ್ಲಿ ನಿರ್ಮಾಣಗೊಂಡ ಮನೆಯನ್ನು ರಾಮಣ್ಣ ನಾಯ್ಕ ದಂಪತಿಗಳಿಗೆ ಹಸ್ತಾಂತರಿಸಲಾಯಿತು.
ಜಿಲ್ಲಾ ಪಂಚಾಯತ್ ಸದಸ್ಯೆ ಪುಷ್ಪಾವತಿ ಬಾಳಿಲ ಮತ್ತು ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್.ರೈ ದೀಪ ಬೆಳಗಿಸಿದ ಬಳಿಕ ಮನೆಯ ‘ಬೆಳಕು‘ ನಾಮಫಲಕವನ್ನು ಅನಾವರಣಗೊಳಿಸಿದರು. ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಉದ್ಘಾಟಿಸಿದರು.
ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಮಾಜಿ ಸದಸ್ಯ ನವೀನ್ ಕುಮಾರ್ ಮೇನಾಲ, ಸುಳ್ಯ ನ.ಪಂ.ಸದಸ್ಯೆ ಶಿಲ್ಪಾ ಸುದೇವ್, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಡಾ.ಕೆ.ಜಿ.ಪುರುಷೋತ್ತಮ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಹರ್ಷಿತಾ ಪುರುಷೋತ್ತಮ, ಪಿ.ಬಿ.ಸುಧಾಕರ ರೈ, ಕೆ.ಎಸ್.ಗೋಪಾಲಕೃಷ್ಣ ಕರೋಡಿ, ಹಸೈನಾರ್ ಹಾಜಿ ಗೋರಡ್ಕ, ಶ್ಯಾಂ ಅಡ್ಡಂತ್ತಡ್ಕ, ಲೋಕೇಶ್ ಗುಡ್ಡೆಮನೆ, ವಿನೋದ್ ಲಸ್ರಾದೋ ಮತ್ತಿತರರು ಉಪಸ್ಥಿತರಿದ್ದರು. ಮನೆ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸಿದ ಸಂಘಟನೆಗಳ ಕಾರ್ಯಕರ್ತರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ದಾನಿಗಳ ಸಹಕಾರದಲ್ಲಿ ಅಜ್ಜಾವರದಲ್ಲಿ ಮತ್ತೊಂದು ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಕುಂಞಿ ಅಹಮ್ಮದ್ ತಿಳಿಸಿದ್ದಾರೆ. ವಿಖ್ಯಾತ್ ಬಾರ್ಪಣೆ ಕಾರ್ಯಕ್ರಮ ನಿರೂಪಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…