Advertisement
ಸುದ್ದಿಗಳು

ಸಹೃದಯಿಗಳ ಸಹಕಾರದಲ್ಲಿ ನಿರ್ಮಾಣಗೊಂಡ “ಬೆಳಕು” ಹಸ್ತಾಂತರ

Share

ಸುಳ್ಯ: ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನೇತೃತ್ವದಲ್ಲಿ ದಾನಿಗಳ ನೆರವಿನಿಂದ ಮತ್ತು ಯುವ ಸಂಘಟನೆಗಳ ಕಾರ್ಯಕರ್ತರ ಶ್ರಮದಾನದಿಂದ ಅಜ್ಜಾವರದಲ್ಲಿ ನಿರ್ಮಾಣಗೊಂಡ ನೂತನ ಮನೆ ‘ಬೆಳಕು‘ ಹಸ್ತಾಂತರ ಕಾರ್ಯಕ್ರಮ ಶುಕ್ರವಾರ ನಡೆಯಿತು. ಗ್ರಾಮದ ಅಡ್ಪಾಂಗಾಯ ಮಾವಿನಪಳ್ಳದಲ್ಲಿ ನಿರ್ಮಾಣಗೊಂಡ ಮನೆಯನ್ನು ರಾಮಣ್ಣ ನಾಯ್ಕ ದಂಪತಿಗಳಿಗೆ ಹಸ್ತಾಂತರಿಸಲಾಯಿತು.

ಜಿಲ್ಲಾ ಪಂಚಾಯತ್ ಸದಸ್ಯೆ ಪುಷ್ಪಾವತಿ ಬಾಳಿಲ ಮತ್ತು ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್‌.ರೈ ದೀಪ ಬೆಳಗಿಸಿದ ಬಳಿಕ ಮನೆಯ ‘ಬೆಳಕು‘ ನಾಮಫಲಕವನ್ನು ಅನಾವರಣಗೊಳಿಸಿದರು. ತಹಶೀಲ್ದಾರ್ ಎನ್.ಎ‌.ಕುಂಞಿ ಅಹಮ್ಮದ್ ಉದ್ಘಾಟಿಸಿದರು.

ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಮಾಜಿ ಸದಸ್ಯ ನವೀನ್ ಕುಮಾರ್ ಮೇನಾಲ, ಸುಳ್ಯ ನ.ಪಂ.ಸದಸ್ಯೆ ಶಿಲ್ಪಾ ಸುದೇವ್, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಡಾ.ಕೆ.ಜಿ.ಪುರುಷೋತ್ತಮ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಹರ್ಷಿತಾ ಪುರುಷೋತ್ತಮ, ಪಿ.ಬಿ.ಸುಧಾಕರ ರೈ, ಕೆ.ಎಸ್.ಗೋಪಾಲಕೃಷ್ಣ ಕರೋಡಿ, ಹಸೈನಾರ್ ಹಾಜಿ ಗೋರಡ್ಕ, ಶ್ಯಾಂ ಅಡ್ಡಂತ್ತಡ್ಕ, ಲೋಕೇಶ್ ಗುಡ್ಡೆಮನೆ, ವಿನೋದ್ ಲಸ್ರಾದೋ ಮತ್ತಿತರರು ಉಪಸ್ಥಿತರಿದ್ದರು. ಮನೆ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸಿದ ಸಂಘಟನೆಗಳ ಕಾರ್ಯಕರ್ತರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ದಾನಿಗಳ ಸಹಕಾರದಲ್ಲಿ ಅಜ್ಜಾವರದಲ್ಲಿ ಮತ್ತೊಂದು ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಕುಂಞಿ ಅಹಮ್ಮದ್ ತಿಳಿಸಿದ್ದಾರೆ. ವಿಖ್ಯಾತ್ ಬಾರ್ಪಣೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

7 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

7 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

21 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

21 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

1 day ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

1 day ago