ಧಾರ್ಮಿಕ

ಸಾಮರಸ್ಯ ಬೆಸೆಯುವ ಕುಂಡಡ್ಕ-ಮುಕ್ಕೂರು ಗಣೇಶೋತ್ಸವಕ್ಕೆ ಹತ್ತರ ಸಂಭ್ರಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ : ಜಾತಿ, ಧರ್ಮ, ಪಕ್ಷ ಎಂಬ ಬೇಲಿ ದಾಟಿ ಸರ್ವಧರ್ಮಿಯರು ಒಂದುಗೂಡಿ ವಿಶಿಷ್ಟ ಕಾರ್ಯಚಟುವಟಿಕೆ ಮೂಲಕ ವರ್ಷಂಪ್ರತಿ ಕಾರ್ಯಕ್ರಮ ಹಮ್ಮಿಕೊಳ್ಳುವ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಂಡಡ್ಕ ಮುಕ್ಕೂರು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆ ಈ ಬಾರಿ ಹತ್ತರ ಹರೆಯ.

Advertisement

2009 ಸೆಪ್ಟೆಂಬರ್ 18 ರಂದು ಈ ಸಮಿತಿ ಜನ್ಮ ತಾಳಿದೆ. ಕಳೆದ ಹತ್ತು ಅವಧಿಯಲ್ಲಿ ಹತ್ತಾರು ಕಾರ್ಯಚಟುವಟಿಕೆ ಮೂಲಕ ತನ್ನೂರಿನಲ್ಲಿ ಹೆಜ್ಜೆ ಗುರುತು ಮೂಡಿಸಿರುವ ಇಪ್ಪತ್ತು ಜನರ ಪುಟ್ಟ ತಂಡವೊಂದು ತಾಲೂಕಿನ ವಿಶೇಷ, ವಿಶಿಷ್ಟ ಸಂಘಟನೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಜಾತಿ, ಧರ್ಮ, ಪಕ್ಷ ಬೇಧವಿಲದೆ ರಚನೆಗೊಂಡ ಸಂಘಟನೆ ಇದಾಗಿದ್ದು, ಇಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುವುದಿಲ್ಲ. ಕ್ರೀಡಾಕೂಟ, ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಗಣೇಶೋತ್ಸವ ಆಚರಣೆ ಇಲ್ಲಿನ ವಿಶೇಷತೆ. ಇಲ್ಲಿ ಸರ್ವಧರ್ಮಿಯರು ಸಂಘಟನೆ ನೇತೃತ್ವ ವಹಿಸಿ ಯಶಸ್ಸಿಯಾಗಿ ಮುನ್ನಡೆಸಿರುವುದು ಈ ಊರಿನ ಸಾಮರಸ್ಯ, ಸೌಹಾರ್ದತೆಗೆ ಒಂದು ಉದಾಹರಣೆ ಎನ್ನುತ್ತಾರೆ ಸಮಿತಿಯ ಸ್ಥಾಪಕ ಜಗನ್ನಾಥ ಪೂಜಾರಿ ಮುಕ್ಕೂರು.

ಪ್ರಾರಂಭದ ದಿನಗಳಲ್ಲಿ ನಿರ್ಧಿಷ್ಟ ಸ್ಪರ್ಧೆಗಳಿಗೆ ಸೀಮಿತವಾಗಿದ್ದ ಕಾರ್ಯಕ್ರಮ ಕ್ರಮೇಣ ಹಲವು ಚಟುವಟಿಕೆಗಳನ್ನು ಸೇರಿಸಿಕೊಂಡು ವರ್ಷದಿಂದ ವರ್ಷಕ್ಕೆ ಅರ್ಥಪೂರ್ಣ ನೆಲೆಯಲ್ಲಿ ಆಯೋಜನೆಗೊಂಡು ಸರ್ವ ಸಮುದಾಯದ ಪ್ರೀತಿಗೆ ಪಾತ್ರವಾಗಿದೆ. ಊರ ಸಾಧಕರನ್ನು ಮತ್ತು ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ನಡೆಯುತ್ತಿದೆ. ಈಗಾಗಲೇ ಈ ಊರಿನ 50ಕ್ಕೂ ಅಧಿಕ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳನ್ನು ಗುರುತಿಸಿ ಸಮ್ಮಾನಿಸಲಾಗಿದೆ ಎನ್ನುತ್ತಾರೆ ಸಮಿತಿ ಕೋಶಾಧಿಕಾರಿ ರಮೇಶ್ ಕಾನಾವು.

Advertisement

ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬದಿಂದ ಬಂದಿರುವ ಯುವಕರ ತಂಡ ಧರ್ಮ, ಜಾತಿ ಭೇಧವಿಲ್ಲದೆ ಕಟ್ಟಿಕೊಂಡ ಸಮಿತಿ ತನ್ನ ಸಮಾಜಮುಖಿ ಚಿಂತನೆಯ ಭಾಗವಾಗಿ ಕೆಲ ಬಡ ಕುಟುಂಬಕ್ಕೆ ತನ್ನ ವ್ಯಾಪ್ತಿಯೊಳಗೆ ಸಹಕಾರ ನೀಡಿದೆ. ಮುಂದೆಯು ನೀಡುವ ನಿಟ್ಟಿನಲ್ಲಿ ಯೋಜನೆ ಸಿದ್ದಪಡಿಸಿದೆ. ಸಂಭ್ರಮದ ಜತೆಗೆ ಸಹಕಾರದ ಮನೋಭಾವನೆಯ ಸಂಕಲ್ಪದೊಂದಿಗೆ ಈ ಊರಿನಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಸಾಮರಸ್ಯ ಬೆಸೆಯುವ ಕೊಂಡಿಯಾಗಬೇಕು ಎನ್ನುವ ಆಶಯ ಹೊಂದಿದೆ.

ಹತ್ತರ ಹುತ್ತರಿ ಸಂಭ್ರಮ

Advertisement

ದಶ ಸಂಭ್ರಮದ ಪ್ರಯುಕ್ತ ಅ.31 ರಂದು ರಾತ್ರಿ ಮುಕ್ಕೂರು ಶಾಲಾ ವಠಾರದಲ್ಲಿ ಹತ್ತರ ಹುತ್ತರಿ ಸಂಭ್ರಮ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ 20 ಸಾಧಕರಿಗೆ ಸಮ್ಮಾನ ನಡೆಯಲಿದೆ. ಅಖಿಲಾ ಪಜಿಮಣ್ಣು ಮತ್ತು ಸುಂದಾರ ರೈ ಮಂದಾರ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಳ್ಳಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-08-2025 | ಆ.6 ರಂದು ಕೆಲವು ಕಡೆ ಮಳೆ | ಆ.14 ನಂತರ ಹವಾಮಾನ ಹೇಗಿರಬಹುದು..?

ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…

7 hours ago

700 ಕ್ಕೂ ಅಧಿಕ ರೆಸಿಪಿ | ದಿವ್ಯ ಮಹೇಶ್‌ ಅವರಿಗೆ “ಪಾಕ ಪ್ರವೀಣೆ” ಪ್ರಶಸ್ತಿ

ದ ರೂರಲ್‌ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…

12 hours ago

ಮಕ್ಕಳ ಪುಟ | ಪಂಜದ ಕ್ರಿಯೇಟಿವ್‌ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ |

ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…

13 hours ago

ವಿಶ್ವದಲ್ಲಿ ಅಡಿಕೆ ಕೃಷಿ ಹೇಗಿದೆ..? ಭಾರತದಲ್ಲಿ ಅಡಿಕೆ ಆಮದು ಎಷ್ಟು..?

ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…

13 hours ago

ಪ್ಲಾಸ್ಟಿಕ್‌ ತ್ಯಾಜ್ಯ ಕಡಿಮೆ ಮಾಡಲು ಏನು ಕ್ರಮ ? ಅಧ್ಯಯನ ವರದಿ ನಿಯಮ ಗ್ರಾಮಗಳಲ್ಲೂ ಜಾರಿಯಾಗಲಿ

ಪ್ಲಾಸ್ಟಿಕ್ ಮಾಲಿನ್ಯವು  ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…

13 hours ago

ಕೃಷಿಯಲ್ಲಿ ಮೀಥೇನ್ ಕಡಿತದ ಗುರಿ | ವಿಯೆಟ್ನಾಂನಲ್ಲಿ ವಿಶೇಷ ಮಾರ್ಗಸೂಚಿ

ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ  ಹೊರಸೂಸುವ ಮೀಥೇನ್ ಅನ್ನು 30% ರಷ್ಟು…

23 hours ago