Advertisement
ಧಾರ್ಮಿಕ

ಸಾಮರಸ್ಯ ಬೆಸೆಯುವ ಕುಂಡಡ್ಕ-ಮುಕ್ಕೂರು ಗಣೇಶೋತ್ಸವಕ್ಕೆ ಹತ್ತರ ಸಂಭ್ರಮ

Share

ಬೆಳ್ಳಾರೆ : ಜಾತಿ, ಧರ್ಮ, ಪಕ್ಷ ಎಂಬ ಬೇಲಿ ದಾಟಿ ಸರ್ವಧರ್ಮಿಯರು ಒಂದುಗೂಡಿ ವಿಶಿಷ್ಟ ಕಾರ್ಯಚಟುವಟಿಕೆ ಮೂಲಕ ವರ್ಷಂಪ್ರತಿ ಕಾರ್ಯಕ್ರಮ ಹಮ್ಮಿಕೊಳ್ಳುವ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಂಡಡ್ಕ ಮುಕ್ಕೂರು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆ ಈ ಬಾರಿ ಹತ್ತರ ಹರೆಯ.

Advertisement
Advertisement

2009 ಸೆಪ್ಟೆಂಬರ್ 18 ರಂದು ಈ ಸಮಿತಿ ಜನ್ಮ ತಾಳಿದೆ. ಕಳೆದ ಹತ್ತು ಅವಧಿಯಲ್ಲಿ ಹತ್ತಾರು ಕಾರ್ಯಚಟುವಟಿಕೆ ಮೂಲಕ ತನ್ನೂರಿನಲ್ಲಿ ಹೆಜ್ಜೆ ಗುರುತು ಮೂಡಿಸಿರುವ ಇಪ್ಪತ್ತು ಜನರ ಪುಟ್ಟ ತಂಡವೊಂದು ತಾಲೂಕಿನ ವಿಶೇಷ, ವಿಶಿಷ್ಟ ಸಂಘಟನೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಜಾತಿ, ಧರ್ಮ, ಪಕ್ಷ ಬೇಧವಿಲದೆ ರಚನೆಗೊಂಡ ಸಂಘಟನೆ ಇದಾಗಿದ್ದು, ಇಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುವುದಿಲ್ಲ. ಕ್ರೀಡಾಕೂಟ, ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಗಣೇಶೋತ್ಸವ ಆಚರಣೆ ಇಲ್ಲಿನ ವಿಶೇಷತೆ. ಇಲ್ಲಿ ಸರ್ವಧರ್ಮಿಯರು ಸಂಘಟನೆ ನೇತೃತ್ವ ವಹಿಸಿ ಯಶಸ್ಸಿಯಾಗಿ ಮುನ್ನಡೆಸಿರುವುದು ಈ ಊರಿನ ಸಾಮರಸ್ಯ, ಸೌಹಾರ್ದತೆಗೆ ಒಂದು ಉದಾಹರಣೆ ಎನ್ನುತ್ತಾರೆ ಸಮಿತಿಯ ಸ್ಥಾಪಕ ಜಗನ್ನಾಥ ಪೂಜಾರಿ ಮುಕ್ಕೂರು.

ಪ್ರಾರಂಭದ ದಿನಗಳಲ್ಲಿ ನಿರ್ಧಿಷ್ಟ ಸ್ಪರ್ಧೆಗಳಿಗೆ ಸೀಮಿತವಾಗಿದ್ದ ಕಾರ್ಯಕ್ರಮ ಕ್ರಮೇಣ ಹಲವು ಚಟುವಟಿಕೆಗಳನ್ನು ಸೇರಿಸಿಕೊಂಡು ವರ್ಷದಿಂದ ವರ್ಷಕ್ಕೆ ಅರ್ಥಪೂರ್ಣ ನೆಲೆಯಲ್ಲಿ ಆಯೋಜನೆಗೊಂಡು ಸರ್ವ ಸಮುದಾಯದ ಪ್ರೀತಿಗೆ ಪಾತ್ರವಾಗಿದೆ. ಊರ ಸಾಧಕರನ್ನು ಮತ್ತು ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ನಡೆಯುತ್ತಿದೆ. ಈಗಾಗಲೇ ಈ ಊರಿನ 50ಕ್ಕೂ ಅಧಿಕ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳನ್ನು ಗುರುತಿಸಿ ಸಮ್ಮಾನಿಸಲಾಗಿದೆ ಎನ್ನುತ್ತಾರೆ ಸಮಿತಿ ಕೋಶಾಧಿಕಾರಿ ರಮೇಶ್ ಕಾನಾವು.

ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬದಿಂದ ಬಂದಿರುವ ಯುವಕರ ತಂಡ ಧರ್ಮ, ಜಾತಿ ಭೇಧವಿಲ್ಲದೆ ಕಟ್ಟಿಕೊಂಡ ಸಮಿತಿ ತನ್ನ ಸಮಾಜಮುಖಿ ಚಿಂತನೆಯ ಭಾಗವಾಗಿ ಕೆಲ ಬಡ ಕುಟುಂಬಕ್ಕೆ ತನ್ನ ವ್ಯಾಪ್ತಿಯೊಳಗೆ ಸಹಕಾರ ನೀಡಿದೆ. ಮುಂದೆಯು ನೀಡುವ ನಿಟ್ಟಿನಲ್ಲಿ ಯೋಜನೆ ಸಿದ್ದಪಡಿಸಿದೆ. ಸಂಭ್ರಮದ ಜತೆಗೆ ಸಹಕಾರದ ಮನೋಭಾವನೆಯ ಸಂಕಲ್ಪದೊಂದಿಗೆ ಈ ಊರಿನಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಸಾಮರಸ್ಯ ಬೆಸೆಯುವ ಕೊಂಡಿಯಾಗಬೇಕು ಎನ್ನುವ ಆಶಯ ಹೊಂದಿದೆ.

ಹತ್ತರ ಹುತ್ತರಿ ಸಂಭ್ರಮ

ದಶ ಸಂಭ್ರಮದ ಪ್ರಯುಕ್ತ ಅ.31 ರಂದು ರಾತ್ರಿ ಮುಕ್ಕೂರು ಶಾಲಾ ವಠಾರದಲ್ಲಿ ಹತ್ತರ ಹುತ್ತರಿ ಸಂಭ್ರಮ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ 20 ಸಾಧಕರಿಗೆ ಸಮ್ಮಾನ ನಡೆಯಲಿದೆ. ಅಖಿಲಾ ಪಜಿಮಣ್ಣು ಮತ್ತು ಸುಂದಾರ ರೈ ಮಂದಾರ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಳ್ಳಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

5 minutes ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

9 minutes ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

16 minutes ago

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

22 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

22 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

2 days ago