ಸುದ್ದಿಗಳು

ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ:ಕಾನೂನು ಕ್ಷೇತ್ರ ವಿಶಾಲವಾದುದು. ಪ್ರಪಂಚದ ಮೂಲೆ ಮೂಲೆಗಳಲ್ಲಿ ಒಳ್ಳೆಯ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಲು ಕಾನೂನು ಶಿಕ್ಷಣ ಬಹು ಮುಖ್ಯ ಹಾಗೂ ಅತ್ಯಂತ ಗೌರವದ ಸ್ಥಾನವನ್ನು ಸಮಾಜದಲ್ಲಿ ಗಳಿಸಲು ಈ ಹುದ್ದೆ ನೆರವಾಗುವುದು ಎಂದು ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಕೌಶಿಕ್ ಸಿ ಅವರು ಹೇಳಿದರು.

Advertisement

ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜು ವಿದ್ಯಾರ್ಥಿಗಳಿಗಾಗಿ ಪಿಯು ನಂತರ ಕಾನೂನು ಶಿಕ್ಷಣಾವಕಾಶಗಳ ಕುರಿತ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಆಧುನಿಕ ಯುಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆಯುವಲ್ಲಿ ಕಾನೂನು ಶಿಕ್ಷಣ ಮುಖ್ಯ ಪಾತ್ರ ವಹಿಸುವುದು ಎಂದು ಹೇಳಿದರು. ಕಾನೂನು ಪದವಿಯನ್ನು ಪಡೆಯುವುದರ ಮೂಲಕ ಸಮಾಜದಲ್ಲಿ ಜವಾಬ್ದಾರಿಯುತ ವ್ಯಕ್ತಿಗಳಾಗಿ, ಸಮಾಜ ಸೇವೆಯಲ್ಲೂ ತೊಡಗಿಸಿಕೊಳ್ಳಿ ಎಂದು ಕರೆ ನೀಡಿದರು. ಪ್ರಸ್ತುತ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಹೇಳಿದರು. ಅಪರಾಧಿ ಕೃತ್ಯಗಳಿಂದ ದೂರವಿದ್ದು ಉತ್ತಮ ವ್ಯಕ್ತಿಗಳಾಗಿ ಬಾಳಿ ಎಂದು ಕಿವಿಮಾತು ಹೇಳಿದರು.

ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ  ಹರಿಣಿ ಪುತ್ತೂರಾಯ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕರಾದ ಶ್ರೀ ಲಕ್ಷ್ಮಣ್ ಏನೆಕಲ್  ಉಪಸ್ಥಿತರಿದ್ದರು.

ಸಂಖ್ಯಾ ಶಾಸ್ತ್ರ ಉಪನ್ಯಾಸಕಿ  ಹರ್ಷಿತ ಅವರು ಸ್ವಾಗತಿಸಿ , ಅರ್ಥಶಾಸ್ತ್ರ ಉಪನ್ಯಾಸಕ ವಿನಯ ವಂದಿಸಿದರು. ಕನ್ನಡ ಉಪನ್ಯಾಸಕಿ  ಬೇಬಿ ವಿದ್ಯಾ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

6 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

6 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

6 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

17 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago

ರಾಜಸ್ಥಾನದ 30 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ | ರೈತರ ಬ್ಯಾಂಕ್ ಖಾತೆಗಳಿಗೆ ನೇರ ಜಮೆ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…

1 day ago