Advertisement
ಸುದ್ದಿಗಳು

ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ

Share

ಸುಳ್ಯ:ಕಾನೂನು ಕ್ಷೇತ್ರ ವಿಶಾಲವಾದುದು. ಪ್ರಪಂಚದ ಮೂಲೆ ಮೂಲೆಗಳಲ್ಲಿ ಒಳ್ಳೆಯ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಲು ಕಾನೂನು ಶಿಕ್ಷಣ ಬಹು ಮುಖ್ಯ ಹಾಗೂ ಅತ್ಯಂತ ಗೌರವದ ಸ್ಥಾನವನ್ನು ಸಮಾಜದಲ್ಲಿ ಗಳಿಸಲು ಈ ಹುದ್ದೆ ನೆರವಾಗುವುದು ಎಂದು ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಕೌಶಿಕ್ ಸಿ ಅವರು ಹೇಳಿದರು.

ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜು ವಿದ್ಯಾರ್ಥಿಗಳಿಗಾಗಿ ಪಿಯು ನಂತರ ಕಾನೂನು ಶಿಕ್ಷಣಾವಕಾಶಗಳ ಕುರಿತ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಆಧುನಿಕ ಯುಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆಯುವಲ್ಲಿ ಕಾನೂನು ಶಿಕ್ಷಣ ಮುಖ್ಯ ಪಾತ್ರ ವಹಿಸುವುದು ಎಂದು ಹೇಳಿದರು. ಕಾನೂನು ಪದವಿಯನ್ನು ಪಡೆಯುವುದರ ಮೂಲಕ ಸಮಾಜದಲ್ಲಿ ಜವಾಬ್ದಾರಿಯುತ ವ್ಯಕ್ತಿಗಳಾಗಿ, ಸಮಾಜ ಸೇವೆಯಲ್ಲೂ ತೊಡಗಿಸಿಕೊಳ್ಳಿ ಎಂದು ಕರೆ ನೀಡಿದರು. ಪ್ರಸ್ತುತ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಹೇಳಿದರು. ಅಪರಾಧಿ ಕೃತ್ಯಗಳಿಂದ ದೂರವಿದ್ದು ಉತ್ತಮ ವ್ಯಕ್ತಿಗಳಾಗಿ ಬಾಳಿ ಎಂದು ಕಿವಿಮಾತು ಹೇಳಿದರು.

ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ  ಹರಿಣಿ ಪುತ್ತೂರಾಯ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕರಾದ ಶ್ರೀ ಲಕ್ಷ್ಮಣ್ ಏನೆಕಲ್  ಉಪಸ್ಥಿತರಿದ್ದರು.

ಸಂಖ್ಯಾ ಶಾಸ್ತ್ರ ಉಪನ್ಯಾಸಕಿ  ಹರ್ಷಿತ ಅವರು ಸ್ವಾಗತಿಸಿ , ಅರ್ಥಶಾಸ್ತ್ರ ಉಪನ್ಯಾಸಕ ವಿನಯ ವಂದಿಸಿದರು. ಕನ್ನಡ ಉಪನ್ಯಾಸಕಿ  ಬೇಬಿ ವಿದ್ಯಾ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

6 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

7 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

22 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago